ಬಾವಿಗೆ ಬಿದ್ದು ಬಿಎಂಟಿಸಿ ಡ್ರೈವರ್ ಓರ್ವರು ಮೃತಪಟ್ಟ ಘಟನೆ ನಡೆದಿದೆ. ಸ್ಥಳಕ್ಕೆ ಶಾಸಕರು ಭೇಟಿ ನಿಡಿ ಸಾಂತ್ವನ ಹೇಳಿದ್ದಾರೆ. 

ಶಿರಾ (ನ.18): ಮಾವನ ಮನೆಗೆ ಬಂದಿದ್ದ ಬಿಎಂಟಿಸಿ ಡ್ರೈವರ್‌ ಜಮೀನಿನಿಂದ ಟ್ರಾಕ್ಟರ್‌ ತರುತ್ತಿದ್ದಾಗ ಆಯತಪ್ಪಿ ಬಾವಿಗೆ ಟ್ರಾಕ್ಟರ್‌ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಂಜನಾಳ್‌ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Add Asianetnews Kannada as a Preferred SourcegooglePreferred

ಕಾಟೇನಹಳ್ಳಿ ಗ್ರಾಮದ ವೀರಭದ್ರಯ್ಯ(40) ಮೃತ ವ್ಯಕ್ತಿ. ಇವರು ಬಿಎಂಟಿಸಿ ಡ್ರೈವರ್‌ ಕಂ ಕಂಡಕ್ಟರ್‌ ಆಗಿದ್ದಾರೆ. ದೀಪಾವಳಿ ಹಬ್ಬಕ್ಕೆ ರಜೆ ಇದ್ದರಿಂದ ಶಿರಾ ತಾಲೂಕು ಹುಂಜನಾಳ್‌ ಗ್ರಾಮದ ತನ್ನ ಮಾವನ ಮನೆಗೆ ಬಂದಿದ್ದರು. ಮಂಗಳವಾರ ಬೆಳಗ್ಗೆ ಜಮೀನಿನಲ್ಲಿದ್ದ ಟ್ರ್ಯಾಕ್ಟರ್‌ ತರಲು ಹೋಗಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಸಿಎಂ ಅಂಕಲ್ ಅಪ್ಪನಿಗೆ ಸಂಬಳ ಕೊಡಿ ಪ್ಲೀಸ್, ಮನೆಯಲ್ಲಿ ಹಬ್ಬವಿಲ್ಲ' .

ಶಾಸಕರ ಭೇಟಿ: ವಿಷಯ ತಿಳಿದ ತಕ್ಷಣ ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಅವರು ಟ್ರಾಕ್ಟರ್‌ ಮುಗುಚಿ ಬಿದ್ದು ಸಾವನ್ನಪ್ಪಿದ್ದ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌.ಗೌಡ, ತಾ.ಪಂ. ಉಪಾಧ್ಯಕ್ಷ ರಂಗನಾಥ್‌ ಗೌಡ ಹಾಜರಿದ್ದರು.