ಡೆಂಘೀ, ಮಲೇರಿಯಾ, ಚಿಕೂನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಜನರನ್ನು ಕಂಗೆಡಿಸಿದೆ. ರಾಜ್ಯದಲ್ಲಿ ಹಲವೆಡೆ ಜನ ರೋಗ ಭೀತಿಯಲ್ಲಿದ್ದು, ಶಿವಮೊಗ್ಗದಲ್ಲಿ ಬಾಲಕನೊಬ್ಬ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾನೆ. ಜನರು ಸ್ವಚ್ಛತೆ ಕಾಪಾಡುವುದರೊಂದಿಗೆ ರೋಗಗಳ ಬಗ್ಗೆ ಮುಂಜಾಗೃತೆ ವಹಿಸಬೇಕಾಗಿದೆ.
ಶಿವಮೊಗ್ಗ(ಆ.07): ಸಾಗರ ಪಟ್ಟಣದ ಎಸ್.ಎನ್. ನಗರ ನಿವಾಸಿ ಇಲಿಯಾಜ್ ಅವರ ಪುತ್ರ ಮಹಮ್ಮದ್ ಅಜಾನ್(10) ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾನೆ.
Add Asianetnews Kannada as a Preferred Source

ಕಳೆದ ಒಂದು ವಾರದ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರ ತೀವ್ರ ಉಲ್ಭಣಗೊಂಡಿದ್ದರಿಂದ ಪೋಷಕರು ಬಾಲಕನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಡ್ಯ: ಸಹೋದರಿಯರಿಗೆ ಡೆಂಘೀ, ಬಾಲಕಿ ಸಾವು
ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬಾಲಕ ಮೃತಪಟ್ಟಿದ್ದಾನೆ. ಡೆಂಘೀ ಜ್ವರದಿಂದಲೇ ಬಾಲಕ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ದೃಢಪಡಿಸಿವೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಜನರು ಹೆಚ್ಚಿನ ಮುಂಜಾಗೃತೆ ವಹಿಸಿಕೊಳ್ಳಬೇಕಾಗಿದೆ.
