ಹೋಂ ಕ್ವಾರಂಟೈನ್‌ನಲ್ಲಿದ್ದ 15 ವರ್ಷದ ಬಾಲಕ ಮನೆಯಿಂದ ಹೊರಗೆ ಹೋಗಲು ತಾಯಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಾಲಿಗ್ರಾಮ ಗ್ರಾಮದ ಮಾಣಿಕಟ್ಟು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಕೋಟ(ಜು.08): ಹೋಂ ಕ್ವಾರಂಟೈನ್‌ನಲ್ಲಿದ್ದ 15 ವರ್ಷದ ಬಾಲಕ ಮನೆಯಿಂದ ಹೊರಗೆ ಹೋಗಲು ತಾಯಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಾಲಿಗ್ರಾಮ ಗ್ರಾಮದ ಮಾಣಿಕಟ್ಟು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

Add Asianetnews Kannada as a Preferred SourcegooglePreferred

ಮೃತ ಬಾಲಕ ಕಾರ್ತಿಕ್‌, ಕೋಟ ವಿವೇಕ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ. ಅವನ ತಾಯಿ ಕೆಲಸ ಮಾಡುತಿದ್ದ ಮನೆಯವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಮತ್ತು ಕಾರ್ತಿಕ್‌ ಅವರಿಗೆ ಹೋಂ ಕ್ವಾರಂಟೈನ್‌ ವಿಧಿಸಲಾಗಿತ್ತು. ಆದರೆ ಕಾರ್ತಿಕ್‌ ಮನೆಯೊಳಗಿರಲಾರದೆ ಹೊರಗೆ ಹೋಗಿ ಆಡುವುದಕ್ಕೆ ಬಯಸುತ್ತಿದ್ದ, ಆದರೆ ಹೋಂ ಕ್ವಾರಂಟೈನ್‌ನಲ್ಲಿರುವುದರಿಂದ ಹೊರಗೆ ಹೋಗಲು ತಾಯಿ ಅವಕಾಶ ನೀಡಿರಲಿಲ್ಲ.

ಕೊರೋನಾಗೆ ಹೆದರಿ ಆತ್ಮಹತ್ಯೆ: ಟೆಸ್ಟ್ ನೆಗೆಟಿವ್..!

ಈ ಕಾರಣಕ್ಕೆ ಸಿಟ್ಟುಗೊಂಡ ಕಾರ್ತಿಕ್‌ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದ. ತಕ್ಷಣ ತಾಯಿ ಅದನ್ನು ನೋಡಿ ನೆರೆಯವರ ಸಹಾಯದಿಂದ ಕೆಳಗಿಳಿಸಿ ಬ್ರಹ್ಮಾವರದ ಮಹೇಶ ಆಸ್ಪತ್ರೆಗೆ ಕರೆದೊಯ್ದರೂ ಕಾರ್ತಿಕ್‌ ಅದಾಗಲೇ ಕೊನೆಯುಸಿರೆಳೆದಾಗಿತ್ತು. ನಂತರ ಆತನ ಗಂಟಲದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]