ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಡೆದ ಘಟನೆ| ಮದುಮಗನ ನಿಧನದಿಂದ ಶೋಕಸಾಗರದಲ್ಲಿ ಮಳುಗಿದ ಗ್ರಾಮ| ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮದುಮಗ| 

ಧಾರವಾಡ(ಮೇ.02): ಮದುವೆಯಾದ ಒಂದೇ ದಿನದಲ್ಲಿ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಇಂದು(ಭಾನುವಾರ) ಜರುಗಿದೆ. ಶಶಿಕುಮಾರ್ ಪಟ್ಟಣಶೆಟ್ಟಿ (ಅರಿಷಣಗೇರಿ)(28)ಎಂಬ ಯುವಕನೇ ಸಾವಿಗೀಡಾದ ದುರ್ದೈವಿಯಾಗಿದ್ದಾನೆ. 

Add Asianetnews Kannada as a Preferred SourcegooglePreferred

ಮದುಮಗನ ನಿಧನದಿಂದ ಸಂಬಂಧಿಕರಲ್ಲಿ ದುಗುಡ ಮಡುಗಟ್ಟಿದೆ. ತಬಕದಹೊನ್ನಳ್ಳಿಯಲ್ಲಿ ಶನಿವಾರ ವರನ ಸ್ವಗೃಹದಲ್ಲಿ ಸರಳವಾಗಿ ಮದುವೆ ಜರುಗಿತ್ತು. ಈ ಮೊದಲು ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಜ್ವರದ ನಡುವೆ ಕೂಡ ಗುಗ್ಗಳ ಮದುವೆಯ ಶಾಸ್ತ್ರ ಮುಗಿಸಿ ನಂತರ ಶಿಗ್ಗಾವ ತಾಲೂಕಿನ‌ ಮುಕಬಸರಿಕಟ್ಟಿಯಲ್ಲಿನ ವಧುವಿನ ಮನೆಗೆ ನವ ದಂಪತಿಗಳು ತೆರಳಿದ್ದರು ಎನ್ನಲಾಗಿದೆ.

ಸಿಂಧನೂರು: ಹಸೆಮಣೆ ಏರಬೇಕಿದ್ದ ಮದುಮಗ ಅಕಾಲಿಕ ನಿಧನ

ವಧುವಿನ ಮನೆಯಲ್ಲಿ ಶಶಿಕುಮಾರ್‌ಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಶಶಿಕುಮಾರ್‌ ಹಠಾತ್‌ ನಿಧನನಿಂದ ಎರಡೂ‌ ಕುಟುಂಬಗಳಲ್ಲಿ ನೀರವ ಮೌನ ಆವರಿಸಿದೆ. ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಚಿತು ಇಡೀ ಗ್ರಾಮವೇ ಶೋಕಸಾಗರದಲ್ಲಿ ಮಳುಗಿದೆ.