BRTS ಚಿಗರಿ ಬಸ್ ಡಿಕ್ಕಿ: ಸ್ಥಳದಲ್ಲೇ ಸಾವು| ಹುಬ್ಬಳ್ಳಿಯಲ್ಲಿ ನಡೆದ ಘಟನೆ| ಮೃತ ವ್ಯಕ್ತಿಯ ಮಾಹಿತಿ ತಿಳಿದು ಬಂದಿಲ್ಲ|ಭೈರಿದೇವರಕೊಪ್ಪದ ಬಸ್ ನಿಲ್ದಾಣದಿಂದ ಎದುರಿನ ಶಿವಾನಂದ ಮಠದ ಕಡೆ ರಸ್ತೆ ದಾಟುತ್ತಿದ್ದ ವೇಳೆ ನಡೆದ ಘಟನೆ|
ಹುಬ್ಬಳ್ಳಿ(ಫೆ.26): ನಗರದ ಭೈರಿದೇವರ ಕೊಪ್ಪದ ಬಳಿಯ ಕ್ರಾಸ್ನಲ್ಲಿ ಮಂಗಳವಾರ ಸಂಜೆ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
Add Asianetnews Kannada as a Preferred Source

ಮೃತ ವ್ಯಕ್ತಿ ನವನಗರದ ನಿವಾಸಿ ಎನ್ನಲಾಗಿದ್ದು, ಆತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಭೈರಿದೇವರಕೊಪ್ಪದ ಬಸ್ ನಿಲ್ದಾಣದಿಂದ ಎದುರಿನ ಶಿವಾನಂದ ಮಠದ ಕಡೆ ರಸ್ತೆ ದಾಟುತ್ತಿದ್ದ ವೇಳೆ ಎದುರಿಗೆ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ವ್ಯಕ್ತಿ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
