ಉಪ್ಪಿನಂಗಡಿಯ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಮಿನಿ ಬಸ್ಸೊಂದು ಹೆದ್ದಾರಿ ಬದಿಗೆ ಮಗುಚಿ ಬಿದ್ದು, ಬಸ್‌ನಲ್ಲಿದ್ದ 12 ಮಂದಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ. 

ಮಂಗಳೂರು(ಫೆ.17): ಉಪ್ಪಿನಂಗಡಿಯ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಮಿನಿ ಬಸ್ಸೊಂದು ಹೆದ್ದಾರಿ ಬದಿಗೆ ಮಗುಚಿ ಬಿದ್ದು, ಬಸ್‌ನಲ್ಲಿದ್ದ 12 ಮಂದಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಕಲೇಶಪುರದ ಬಾಗೆ ಎಂಬಲ್ಲಿಂದ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆಂದು ಕುಟುಂಬ ಸದಸ್ಯರನ್ನು ಸಾಗಿಸುತ್ತಿದ್ದ ಮಿನಿಬಸ್‌ನ ಸ್ಟೇರಿಂಗ್‌ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಹೆದ್ದಾರಿಯ ಬದಿಗೆ ಮಗುಚಿ ಬಿತ್ತು.

ನಗರದಲ್ಲಿ ರೇಬಿಸ್‌ಗೆ ಎರಡು ಬಲಿ!

ಈ ಪರಿಣಾಮ ಬಸ್‌ನಲ್ಲಿದ್ದ ವಿನೋದಾ ರೈ, ಶ್ರೀಧರ ಶೆಟ್ಟಿ, ಜಗನ್ನಾಥ್‌ ಶೆಟ್ಟಿ, ಪ್ರೇಮಲತಾ, ಡೀಲಾಕ್ಷ, ಚಾಲಕ ಮಹೇಶ್‌ ಗಂಭೀರ ಗಾಯಗೊಂಡು ಮಂಗಳೂರು ಹಾಗೂ ಪುತ್ತೂರಿನ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಳಿದ ಆರು ಮಂದಿ ಗಂಭೀರ ಸ್ವರೂಪವಲ್ಲದ ಗಾಯವನ್ನು ಪಡೆದಿದ್ದು, ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಿರ್ಗಮಿಸಿದ್ದಾರೆ. ಘಟನೆಗೆ ಸಂಬಂಧಿಸಿ ಬಸ್‌ನಲ್ಲಿದ್ದ ಜಯಣ್ಣ ಶೆಟ್ಟಿಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ಪಲ್ಟಿ ಹೊಡೆದ ಬಸ್‌: 50 ಜನಕ್ಕೆ ಗಾಯ, ನಾಲ್ವರ ಸ್ಥಿತಿ ಗಂಭೀರ...