ಲಾರಿಗಳಲ್ಲಿ ಅಕ್ರಮವಾಗಿ ಹೋಗುತ್ತಿದ್ದ 184 ಮಂದಿ ಮಹಾರಾಷ್ಟ್ರ ಕಾರ್ಮಿಕರಿಗೆ ಬಸ್‌ ವ್ಯವಸ್ಥೆ| ಹುಬ್ಬಳ್ಳಿಯ ವರೂರು- ಅಗಡಿ ಚೆಕ್‌ಪೋಸ್ಟ್‌ ಬಳಿ ಲಾರಿ ತಡೆದು ಪೊಲೀಸರು ಪರಿಶೀಲಿಸಿದಾಗ ಕಾರ್ಮಿಕರಿರುವುದು ಪತ್ತೆ| ಲಾರಿ ಚಾಲಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು|

ಹುಬ್ಬಳ್ಳಿ(ಮೇ.29): ಚಿತ್ರದುರ್ಗದಿಂದ ಮಹಾರಾಷ್ಟ್ರದತ್ತ ಅಕ್ರಮವಾಗಿ ಲಾರಿಯಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿರುವ ಜಿಲ್ಲಾಡಳಿತ ಅವರನ್ನು ಬಸ್‌ ಮೂಲಕ ಅವರ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗ ಜಿಲ್ಲೆಯಿಂದ ಮಹಾರಾಷ್ಟ್ರದ 184 ಕಾರ್ಮಿಕರು 2 ಲಾರಿಗಳಲ್ಲಿ ಯಾವುದೇ ಸಾಮಾಜಿಕ ಅಂತರ ಇಲ್ಲದೇ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಪ್ರಯಾಣಿಸುತ್ತಿದ್ದರು. ಈ ವೇಳೆ ಹುಬ್ಬಳ್ಳಿಯ ವರೂರು- ಅಗಡಿ ಚೆಕ್‌ಪೋಸ್ಟ್‌ ಬಳಿ ಲಾರಿ ತಡೆದು ಪೊಲೀಸರು ಪರಿಶೀಲಿಸಿದಾಗ ಕಾರ್ಮಿಕರಿರುವುದು ಪತ್ತೆಯಾಗಿದ್ದು, ಬಳಿಕ ಅವರನ್ನು ತಪಾಸಣೆಗೊಳಿಸಲಾಯಿತು.

ಲಾಕ್‌ಡೌನ್‌ ಎಫೆಕ್ಟ್‌: ಮದುವೆ ಮುಂದೂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ 

ನಂತರ ಮಹಾರಾಷ್ಟ್ರ ಅಧಿಕಾರಿಗಳ ಭರವಸೆ ಮೇರೆಗೆ ಬಸ್‌ ವ್ಯವಸ್ಥೆ ಮಾಡಿ 6 ಬಸ್‌ಗಳಲ್ಲಿ ಬೆಳಗಾವಿಯ ನಿಪ್ಪಾಣಿ ಗಡಿವರೆಗೆ ಕಾರ್ಮಿಕರನ್ನು ತಲುಪಿಸಲಾಯಿತು. ಅಲ್ಲಿಂದ ಮಹಾರಾಷ್ಟ್ರದ ಬಸ್‌ಗಳು ತಮ್ಮ ಕಾರ್ಮಿಕರನ್ನು ಕರೆದ್ಯೊಯಲಿವೆ. ಲಾರಿ ಚಾಲಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.