ಬೆಳಗಾವಿಯಲ್ಲಿ ಈಗಾಗಲೇ ಸಾಕಷ್ಟು ಬಾರಿ ಅನ್ಯಾಯವಾಗಿದೆ. ಉಡಾನ್‌ ಯೋಜನೆಯಲ್ಲಿಯೂ ಮೊದಲ ಹಂತದಲ್ಲಿ ಆಯ್ಕೆಯಾಗಬೇಕಿತ್ತು. ಕಾರಣಾಂತರಗಳಿಂದ ನೆರೆಯ ಜಿಲ್ಲೆಗೆ ಹೋಗಿ ಎರಡನೇ ಹಂತದಲ್ಲಿ ಹೋರಾಟದ ಮೂಲಕ ಉಡಾನ್‌ ಸೇವೆ ಪಡೆಯುವಂತಾಯಿತು. 

ಬೆಳಗಾವಿ(ಜ.18): ಬೆಳಗಾವಿಯಿಂದ ದೇಶದ ವಿವಿಧ ನಗರಗಳಿಗೆ ಸೇವೆ ನೀಡುತ್ತಿದ್ದ ಕೆಲ ವಿಮಾನ ಸೇವೆ ಸ್ಥಗಿತವಾಗಿರುವುದರಿಂದ ಉದ್ಯಮಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಕುರಿತು ಸರ್ಕಾರ ಹಾಗೂ ಇಲ್ಲಿನ ಜನಪ್ರತಿನಿಧಿಗಳು ಗಮನ ಹರಿಸುವ ಅವಶ್ಯಕತೆ ಇದೆ ಎಂದು ಬೆಳಗಾವಿ ಚೆಂಬರ್‌ ಆಫ್‌ ಕಾಮರ್ಸ್‌ ಸಭಾಂಗಣದಲ್ಲಿ ಮಂಗಳವಾರ ವಿವಿಧ ಉದ್ಯಮಿಗಳು ನಡೆಸಿದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು.

ಚೆಂಬರ್‌ ಆಫ್‌ ಕಾಮರ್ಸ್‌ನ ಅಧ್ಯಕ್ಷ ಹೇಮೆಂದ್ರ ಪೋರವಾಲ ಮಾತನಾಡಿ, ಬೆಳಗಾವಿಯಲ್ಲಿ ಈಗಾಗಲೇ ಸಾಕಷ್ಟು ಬಾರಿ ಅನ್ಯಾಯವಾಗಿದೆ. ಉಡಾನ್‌ ಯೋಜನೆಯಲ್ಲಿಯೂ ಮೊದಲ ಹಂತದಲ್ಲಿ ಆಯ್ಕೆಯಾಗಬೇಕಿತ್ತು. ಕಾರಣಾಂತರಗಳಿಂದ ನೆರೆಯ ಜಿಲ್ಲೆಗೆ ಹೋಗಿ ಎರಡನೇ ಹಂತದಲ್ಲಿ ಹೋರಾಟದ ಮೂಲಕ ಉಡಾನ್‌ ಸೇವೆ ಪಡೆಯುವಂತಾಯಿತು. ಈ ಮತ್ತೆ ಬೆಳಗಾವಿ ವಿಮಾನ ನಿಲ್ದಾಣದಿಂದ ಸುಮಾರು 12 ವಿಮಾನಗಳು ಸೇವೆ ನಿಲ್ಲಿಸಿದ್ದು ಉದ್ಯಮಕ್ಕೆ ಭಾರೀ ನಷ್ಟವಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಅನ್ನಭಾಗ್ಯಕ್ಕೆ ಖದೀಮರ ಕನ್ನ..!

ದೆಹಲಿ, ಚನ್ನೈ, ಮುಂಬಯಿ ಹಾಗೂ ಬೆಂಗಳೂರು ಮಾರ್ಗ ಇನ್ನಷ್ಟುಹೆಚ್ಚಾಗಬೇಕು. ಹೊಸ ಹೊಸ ಉದ್ಯಮಿಗಳು ಬೆಳಗಾವಿಗೆ ಹೂಡಿಕೆ ಮಾಡಲು ಬರುತ್ತಿದ್ದಾರೆ. ವಿಮಾನ ಸೇವೆ ಸಮರ್ಪಕವಾಗಿ ಇರಲಿಲ್ಲ‌ ಎಂದರೆ ಬಂಡವಾಳ ಹೂಡಿಕೆದಾರರು ಹಿಂದೆಟ್ಟು ಹಾಕುತ್ತಾರೆ. ಆದ್ದರಿಂದ ಎಲ್ಲ ಸಂಘ ಸಂಸ್ಥೆಗಳು ಒಗ್ಗಟ್ಟು ಪ್ರದರ್ಶ ಮಾಡಿ ಸರಕಾರಕ್ಕೆ ಒತ್ತಡ ಹಾಕುವ ಅವಶ್ಯಕತೆ ಇದೆ ಎಂದರು. ಬೆಳಗಾವಿ ವೇಗವಾಗಿ ಬೆಳೆಯುತ್ತಿದೆ. ಇದರ ನಡುವೆ ಇಂಥ ವಿಮಾನಗಳು ಬಂದ್‌ ಮಾಡುವುದರಿಂದ ಉದ್ಯಮ ಕ್ಷೇತ್ರದಲ್ಲಿ ಮಾತ್ರವಲ್ಲ. ಶೈಕ್ಷಣಿಕ ಕ್ಷೇತ್ರದಲ್ಲೂ ಭಾರೀ‌ ನಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿಗೆ ಬರಬೇಕಾದ ಯೋಜನೆಗಳು ಸಾಕಷ್ಟುಬೇರೆ ಕಡೆ ಹೋಗಿವೆ. ಬೆಳಗಾವಿಯಲ್ಲಿ ದೊಡ್ಡ ಇಎಸ್‌ಐ ಆಸ್ಪತ್ರೆಯನ್ನು ಕೇಂದ್ರ ಸರ್ಕಾರ ಮಾಡಬೇಕು. ಅಲ್ಲದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ಬಂದ್‌ ಆಗಿರುವ ವಿಮಾನಗಳು ಮತ್ತೇ ಸೇವೆ ಆರಂಭಿಸುವ ಕೆಲಸ ಮಾಡಬೇಕೆಂದರು.

Belagavi news: ಜಿಲ್ಲಾಡಳಿತದ ನೆರಳಲ್ಲಿ ಕಲ್ಲು ಗಣಿಗಾರಿಕೆ?

ಉದ್ಯಮಿ ಅಜೀತಕುಮಾರ ಪಾಟೀಲ ಮಾತನಾಡಿ, ಐಟಿ ಹಾಗೂ ಸಾಫ್‌್ಟವೇರ್‌ಗಳಿಗಾಗಿ ಹೊಸ ಸಂಘ ಸ್ಥಾಪನೆ ಮಾಡಲಾಗಿದೆ. ಐಟಿ ಸಮಸ್ಯೆಯ ಬಗ್ಗೆ ಕೇಳಲು ಯಾವ ವೇದಿಕೆಯೂ ಇಲ್ಲ.‌ಈ ನಿಟ್ಟಿನಲ್ಲಿ ಐಟಿ ಹಾಗೂ ಸಾಫ್ಟ್‌ವೇರ್‌ ಉದ್ಯಮ ಬೆಳೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ಉದ್ಯಮಿ ವೈಭವ ಪ್ರಸಾದ ಮಾತನಾಡಿ, ಕೇವಲ ನಾವು ವಿದೇಶ ಹಾಗೂ ನೆರೆ ರಾಜ್ಯದ ವಿಮಾನ ಪ್ರಯಾಣಿಕರ ಬಗ್ಗೆ ಚರ್ಚೆ ಮಾಡುವುದರ ಜತೆಗೆ ನಿಪ್ಪಾಣಿ, ಖಾನಾಪುರದಿಂದ ಸಾಕಷ್ಟುಜನರು ತಮ್ಮ ತರಕಾರಿ ಸೇರಿದಂತೆ ವಿವಿಧ ಸಾಮಗ್ರಿ ಮಾರಾಟಕ್ಕಾಗಿ ಹುಬ್ಬಳ್ಳಿ​ -ಧಾರವಾಡ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬಗ್ಗೆಯೂ ಚೆಂಬರ್‌ ಆಫ್‌ ಕಾಮರ್ಸ್‌ ಚಿಂತನೆ ನಡೆಸಬೇಕಿದೆ. ಅಲ್ಲದೆ ಉದ್ಯಮಿಗಳ ಕುಟುಂಬಕ್ಕೆ ಇಎಸ್‌ಐ ಆಸ್ಪತ್ರೆ ನಿರ್ಮಾಣ ಮಾಡಿ ಉಚಿತ ಆರೋಗ್ಯ ತಪಾಸಣೆಯನ್ನು ಪ್ರತಿ ವರ್ಷ ನಡೆಸುವಂತಾಗಬೇಕು ಎಂದು ಸಭೆಗೆ ತಿಳಿಸಿದರು. ಈ ಸಭೆಯಲ್ಲಿ ಸ್ವಪ್ನಿಲ್‌ ಶಾಮ್‌, ಡಾ. ದೀಪಾಲಿ ಪಾಟೀಲ, ರಾಜೇಂದ್ರ ಮುತಗೇಕರ, ಆನಂದ ದೇಸಾಯಿ, ಉದಯ ಕಿಂಜವಾಡ್ಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.