ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ರಾಮನಗರ [ಡಿ.04]: ರಾಜ್ಯದಲ್ಲಿ 15 ಕ್ಷೇತ್ರಗಳ ಉಪ ಚುನಾವಣೆ ಇನ್ನು ಒಂದು ದಿನವಷ್ಟೆ ಬಾಕಿ ಉಳಿದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಡಿಸೆಂಬರ್‌ 5ರಂದು ನಡೆಯಲಿದೆ. ಚುನಾವಣೆಯನ್ನು ಶಾಂತಿ, ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಡಿಸೆಂಬರ್‌ 03ರಂದು ಸಂಜೆ 6 ಗಂಟೆಯಿಂದ ಡಿಸೆಂಬರ್‌ 6ರ ಬೆಳಿಗ್ಗೆ 6 ಗಂಟೆಯವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. 

ಬೆಂಗಳೂರಿನಲ್ಲಿ ಮದ್ಯ ನಿಷೇಧ : ಪೊಲೀಸ್ ಕಮಿಷನರ್ ಆದೇಶ...

 ಬೆಂಗಳೂರು ನಗರ ಜಿಲ್ಲೆಯ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಕುಂಬಳಗೂಡಿಂದ ರಾಮನಗರ ಜಿಲ್ಲೆಯ 5 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯದ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಹಂಚಿಕೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್‌. ಅರ್ಚನಾ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಯಶವಂತಪುರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್ , ಕೆಆರ್ ಪುರಂ ನಲ್ಲಿ ಚುನಾವಣೆ ನಡೆಯುತ್ತಿದೆ. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. 

ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9 ರಂದು ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.