ಶಹಾಪುರದಲ್ಲಿ ಅಕ್ಟೋಬರ್ 3 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ನಡೆದಿತ್ತು. ಆಗ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಪ್ರಚೋದನೆ ಭಾಷಣ ಮಾಡಿದ್ದ ಆಂದೋಲಾಶ್ರೀ, ಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯಧರ್ಮೀಯರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು ಎಂಬ ಆರೋಪದಡಿ ಈ ಪ್ರಕರಣ ದಾಖಲು.
ಯಾದಗಿರಿ(ಅ.07): ಶಹಾಪುರದಲ್ಲಿ ಅ.3ರಂದು ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಜೇವರ್ಗಿಯ ಆಂದೋಲಾ ಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶಹಾಪುರದಲ್ಲಿ ಅಕ್ಟೋಬರ್ 3 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ನಡೆದಿತ್ತು. ಆಗ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಪ್ರಚೋದನೆ ಭಾಷಣ ಮಾಡಿದ್ದ ಆಂದೋಲಾಶ್ರೀ, ಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯಧರ್ಮೀಯರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು ಎಂಬ ಆರೋಪದಡಿ ಈ ಪ್ರಕರಣ ದಾಖಲಾಗಿದೆ.
ಯಾದಗಿರಿ: ಶ್ರೀಗಂಧ ಕಳುವು ಮರೆಮಾಚಲು ಹೊಸ ಮರ ಕಡಿದು ತಂದಿಟ್ಟ ಖದೀಮರು..!
ಈ ಮಧ್ಯೆ, ಸತ್ಯ ನುಡಿದ ಆಂದೋಲಾ ಶ್ರೀಗಳ ವಿರುದ್ಧ ಶಹಾಪುರ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸಿ, ವಾಕ್ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಕಲ್ಯಾಣ ಕರ್ನಾಟಕ ಅಧ್ಯಕ್ಷ ವಿಜಯ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
