ಸರ್ಕಾರಿ ನೌಕರಿಯಲ್ಲಿದ್ದು ಆಡಳಿತ ಪಕ್ಷ, ಸರ್ಕಾರವನ್ನು ಟೀಕಿಸಿದವರಿಗೆ ನೋಟಿಸ್‌ ನೀಡುವ, ಸಂಬಳ ತಡೆಹಿಡಿಯುವ ಕೆಲಸ ಮಾಡಲಾಗುತ್ತಿದೆ. ಫೇಸ್‌ಬುಕ್‌ ಸೇರಿ ಮತ್ತಿತರೆಡೆ ಆಡಳಿತ ನೀತಿ ಖಂಡಿಸಿದರೆ ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಸಂಬಂಧವೇ ಇಲ್ಲದ ವಿಚಾರಕ್ಕೆ ಪುನೀತ್‌ ಕೆರೆಹಳ್ಳಿ ಅಂತವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವ ಪ್ರಕ್ರಿಯೆಗಳನ್ನು ಸರ್ಕಾರ ಮಾಡುತ್ತಿದೆ ಎಂದ ಚಕ್ರವರ್ತಿ ಸೂಲಿಬೆಲೆ 

ಬೆಂಗಳೂರು(ಆ.28): ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರ ಟೀಕಿಸಿ ಪೋಸ್ಟ್‌ ಹಾಕಿದವರ ವಿರುದ್ಧ ಎಫ್‌ಐಆರ್‌ ದಾಖಲಿಸುವ, ಸಂಬಂಧವೇ ಇಲ್ಲದ ವಿಚಾರಕ್ಕೆ ಗೂಂಡಾ ಕಾಯ್ದೆಯಡಿ ಬಂಧಿಸುವ ಕೆಲಸವಾಗುತ್ತಿದೆ. ಹಿಂದಿನಂತೆ ಪುನಃ ಅಧಿಕಾರ ಕಳೆದುಕೊಳ್ಳಬಾರದು ಎಂದಾದರೆ ಹಿಂದೂಗಳ ಮೇಲಿನ ದಬ್ಬಾಳಿಕೆಯನ್ನು ಸರ್ಕಾರ ನಿಲ್ಲಿಸಬೇಕು ಎಂದು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.

Add Asianetnews Kannada as a Preferred SourcegooglePreferred

ಭಾನುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಮಸ್ತ ಹಿಂದೂಪರ ಒಕ್ಕೂಟದಿಂದ ‘ಮೇವಾತ್‌, ದೆಹಲಿ ಮತ್ತು ಮಣಿಪುರ ಹಿಂಸಾಚಾರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಮತ್ತು ನ್ಯಾಯ ಒದಗಿಸಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಿ.ಟಿ. ರವಿ, ಚಕ್ರವರ್ತಿ ಸೂಲಿಬೆಲೆ ಬಂಧಿಸುವಂತೆ ದಲಿತ ಸಂಘ ಒತ್ತಾಯ

ಸರ್ಕಾರಿ ನೌಕರಿಯಲ್ಲಿದ್ದು ಆಡಳಿತ ಪಕ್ಷ, ಸರ್ಕಾರವನ್ನು ಟೀಕಿಸಿದವರಿಗೆ ನೋಟಿಸ್‌ ನೀಡುವ, ಸಂಬಳ ತಡೆಹಿಡಿಯುವ ಕೆಲಸ ಮಾಡಲಾಗುತ್ತಿದೆ. ಫೇಸ್‌ಬುಕ್‌ ಸೇರಿ ಮತ್ತಿತರೆಡೆ ಆಡಳಿತ ನೀತಿ ಖಂಡಿಸಿದರೆ ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಸಂಬಂಧವೇ ಇಲ್ಲದ ವಿಚಾರಕ್ಕೆ ಪುನೀತ್‌ ಕೆರೆಹಳ್ಳಿ ಅಂತವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವ ಪ್ರಕ್ರಿಯೆಗಳನ್ನು ಸರ್ಕಾರ ಮಾಡುತ್ತಿದೆ ಎಂದರು.

ಪುನೀತ್‌ ಕೆರೆಹಳ್ಳಿ ಅವರಿಗೆ ಆಗಿರುವುದು ನಿಮಗೂ ಆಗಬಹುದು. ಹೀಗಾಗಿ ಪುನೀತ್‌ ಜೊತೆ ನಾವೆಲ್ಲ ನಿಲ್ಲುತ್ತೇವೆ ಎಂಬ ಸಂದೇಶವನ್ನು ಸರ್ಕಾರಕ್ಕೆ ನೀಡಬೇಕಿದೆ. ದಲಿತರ ಅಭಿವೃದ್ಧಿ ಅನುದಾನವನ್ನು ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತವರು ಜಿಲ್ಲೆಯಲ್ಲೇ ಪೌರಕಾರ್ಮಿಕರು ಮಲವನ್ನು ಮೈಮೇಲೆ ಸುರಿದುಕೊಂಡು ಪ್ರತಿಭಟಿಸುವ ಮಟ್ಟಕ್ಕೆ ಆಡಳಿತ ಯಂತ್ರ ಕುಸಿದಿದೆ ಎಂದು ಟೀಕಿಸಿದರು.
ಹಿಂದೂ ಜನಜಾಗೃತಿ ಸಮಿತಿಯ ಮೋಹನ್‌ ಗೌಡ ಮಾತನಾಡಿ, ಮೇವಾತ್‌, ದೆಹಲಿ ಮತ್ತು ಮಣಿಪುರ ಹಿಂಸಾಚಾರದ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.

ರಾಷ್ಟ್ರ ರಕ್ಷಣಾ ಪಡೆಯ ಪೂರ್ಣಿಮಾ ಬಾರಿಮನಿ ಮಾತನಾಡಿದರು.

ರಾಷ್ಟ್ರ ಧರ್ಮ ಸಂಘಟನೆಯ ಸಂತೋಷ್‌ ಕೆಂಚಾಂಬಾ, ಹಿಂದವೀ ಜಟ್ಕಾ ಮೀಟ್‌ನ ಮುನೇಗೌಡ, ಶಿವಪ್ರಸಾದ್‌, ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ರಾಮಕೃಷ್ಣಪ್ಪ, ಶಿವಗರ್ಜನೆ ಸೇನೆ ಅಧ್ಯಕ್ಷ ಪ್ರವೀಣ ಮಾನೆ, ರಾಷ್ಟ್ರೀಯ ಹಿಂದೂ ಪರಿಷದ್‌ ಅಧ್ಯಕ್ಷ ವಿಕ್ರಮ ಶೆಟ್ಟಿ, ರಾಷ್ಟ್ರ ರಕ್ಷಾ ಸೇನೆಯ ಸುರೇಶ್‌ಗೌಡ, ನ್ಯಾಯವಾದಿ ದೊರೆರಾಜು ಇದ್ದರು.