Asianet Suvarna News Asianet Suvarna News

ಬಾಗಲಕೋಟೆ: ಸೋಂಕಿತನ ಅಂತ್ಯಕ್ರಿಯೆಗೆ ನೂರಾರು ಮಂದಿ, ಕೇಸ್‌ ದಾಖಲು

ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಕೊರೋನಾ ಸೋಂಕಿತ| ತೋಟದ ಮನೆಗೆ ತಂದು ಅಂತ್ಯಕ್ರಿಯೆ| ಅಧಿಕ ಜನರನ್ನು ಸೇರಿಸಿ ಕುಟುಂಬಸ್ಥರಿಂದ ಅಂತ್ಯಸಂಸ್ಕಾರ| ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದಲ್ಲಿ ನಡೆದ ಘಟನೆ| 

Case Register Against Those Who Attend Funeral of the infected in Bagalkot grg
Author
Bengaluru, First Published May 1, 2021, 8:40 AM IST

ಬಾಗಲಕೋಟೆ(ಮೇ.01): ಕೊರೋನಾ ಸೋಂಕಿಗೆ ಮೃತಪಟ್ಟ ರೋಗಿಯೊಬ್ಬರ ಶವಕ್ಕೆ ಕೋವಿಡ್‌ ನಿಯಮ ಉಲ್ಲಂಘಿಸಿ 100ರಿಂದ 150 ಜನರನ್ನು ಸೇರಿಸಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಸೋಂಕಿತರೊಬ್ಬರು ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದರು. ಅವರ ಕುಟುಂಬಸ್ಥರು ಶವವನ್ನು ತಮ್ಮ ತೋಟದ ಮನೆಗೆ ತಂದು ಅಂತ್ಯಕ್ರಿಯೆ ನಡೆಸಿದ್ದಾರೆ.

"

ಹಾಸಿಗೆ ಸಿಗದೆ ಸಾವು, ಬಾಗಲಕೋಟೆಯಲ್ಲೂ ಅದೇ ಹಣೇಬರಹ

ನಿಯಮಾವಳಿ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದ್ದರೂ ಅಧಿಕ ಜನರನ್ನು ಸೇರಿಸಿ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಲಾಗಿದ್ದು ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios