ಬೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣ| ಭೀಮಾತೀರದ ಮಾಸ್ಟರ್‌ ಮೈಂಡ್‌, ನಟೋರಿಯಸ್‌ ಮಲ್ಲಿಕಾರ್ಜುನ ಚಡಚಣ ಹಾಗೂ ಅವನ ಪತ್ನಿ ವಿಮಲಾಬಾಯಿ ಚಡಚಣ ಮೇಲೂ ಪ್ರಕರಣ ದಾಖಲು|   

ವಿಜಯಪುರ(ಡಿ.10):  ಭೀಮಾತೀರದ ಮಹಾದೇವ ಸಾಹುಕಾರ ಬೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮಾತೀರದ ಮಾಸ್ಟರ್‌ ಮೈಂಡ್‌, ನಟೋರಿಯಸ್‌ ಮಲ್ಲಿಕಾರ್ಜುನ ಚಡಚಣ ಹಾಗೂ ಅವನ ಪತ್ನಿ ವಿಮಲಾಬಾಯಿ ಚಡಚಣ ಮೇಲೂ ಪ್ರಕರಣ ದಾಖಲಾಗಿದೆ.

Add Asianetnews Kannada as a Preferred SourcegooglePreferred

ನಗರದ ಹೊರವಲಯ ಕನ್ನಾಳ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ ಹತ್ತಿರ ನ.2ರಂದು ಮಹಾದೇವ ಸಾಹುಕಾರ ಬೈರಗೊಂಡ ಕಾರಿಗೆ ಟಿಪ್ಪರ್‌ ಡಿಕ್ಕಿ ಹೊಡಿಸಿ, ಗುಂಡಿನ ದಾಳಿ ನಡೆದಿತ್ತು. ಈ ಘಟನೆಯಲ್ಲಿ ಬೈರಗೊಂಡ ಸಹಚರ ಹಾಗೂ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದರು.

ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ: ಪ್ರಮುಖ ಆರೋಪಿ ಬಂಧನ

ಈ ಪ್ರಕರಣದಲ್ಲಿ ಅದೇ ಮಾಸ್ಟರ್‌ ಮೈಂಡ್‌ ಮಲ್ಲಿಕಾರ್ಜುನ ಚಡಚಣ ಕೈವಾಡವಿದೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಈತ ಕಳೆದೆರಡು ದಶಕಗಳಿಂದ ತಲೆ ಮರೆಸಿಕೊಂಡು ಮಹಾದೇವ ಸಾಹುಕಾರ ಬೈರಗೊಂಡ ಹತ್ಯೆಗೆ ಸಂಚು ರೂಪಿಸಿದ್ದಾನೆ. ಈತನ ಬಂಧನಕ್ಕೆ ಜಿಲ್ಲಾ ಪೊಲೀಸರು ಜಾಲ ಬೀಸಿದ್ದಾರೆ.

ಬೈರಗೊಂಡ ಮೇಲಿನ ಈ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮರಾಜ ಚಡಚಣ ಭಂಟ ಮಡುಸ್ವಾಮಿ(ಮಡಿವಾಳಯ್ಯ) ಹಿರೇಮಠ ಸೇರಿದಂತೆ 30 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕೃತ್ಯಕ್ಕೆ ಬಳಸಿದ 5 ಪಿಸ್ತೂಲ್‌, 10 ಜೀವಂತ ಗುಂಡುಗಳು, 27 ಮೊಬೈಲ್‌, 8 ತಲ್ವಾರ್‌, ಬೈಕ್‌ ಸೇರಿದಂತೆ ವಾಹನ ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಅನುಪಮ್‌ ಅಗರವಾಲ್‌ ತಿಳಿಸಿದರು.