ಕರ್ತವ್ಯ ಲೋಪ ಎಸಗಿರುವ ಮುಡಾದ ಈ ಹಿಂದಿನ ಇಬ್ಬರು ಆಯುಕ್ತರು ಹಾಗೂ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮುಡಾ ಹಗರಣ ಸಂಬಂಧ ಈಗಾಗಲೇ ಇಡಿ ಎಂಟ್ರಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಸಿಬಿಐ ತನಿಖೆಗೆ ಮುಂದಾಗಬಹುದು. ಸಿಬಿಐ ಪ್ರವೇಶಿಸಿದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗಬಹುದು ಎಂದು ಹೇಳಿದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ 

ಮೈಸೂರು(ನ.19): ಮುಡಾದಲ್ಲಿ ನಡೆದಿರುವ ಬಹಕೋಟಿ ಹಗರಣದ ತನಿಖೆಗೆ ಸಿಬಿಐ ಮುಂದಾಗಲಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ತಿಳಿಸಿದರು. 

Add Asianetnews Kannada as a Preferred SourcegooglePreferred

ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಸಂಖ್ಯೆ 1ರ ಕಟ್ಟಡದಲ್ಲಿ ತಮ್ಮ ಕಚೇರಿಯನ್ನು ಸೋಮವಾರ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ನಡೆದಿರುವ ಹಗರಣದ ಅನೇಕ ಕಡತಗಳು ನಾಪತ್ತೆಯಾಗಿವೆ. ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ವೇಳೆ ಬಚ್ಚೇಗೌಡರಿಗೆ ಸಂಬಂಧಿಸಿದ ದಾಖಲೆ ಪ್ರದರ್ಶಿಸಿದರು. ಸಿಎಂ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ದಾಖಲೆ ಪತ್ರಕ್ಕೆ ವೈಟ್ನರ್‌ ಹಾಕಿದ ಪ್ರತಿಯೂ ಸಿಎಂ ಕಚೇರಿಯಲ್ಲಿದೆ. ಈ ಎಲ್ಲಾ ಕಡತಗಳು ಮುಡಾದಲ್ಲಿ ಇರಬೇಕಿತ್ತು. ಆದರೆ, ಸಿಎಂ ಕಚೇರಿಗೆ ತಲುಪಿವೆ ಎಂದು ದೂರಿದರು. ಮುಡಾ 50:50 ಅನುಪಾತದ ಹಲವು ಫೈಲ್ ಗಳು ನಾಪತ್ತೆಯಾಗಿವೆ. ನ.30ಕ್ಕೆ ನಡೆಯುವ ಮುಡಾ ಸಭೆಯಲ್ಲಿ ಈ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗುವುದು. ಮುಡಾ ಹಗರಣದ ವಿಚಾರದಲ್ಲಿ ದೂರುದಾರರ ವಿರುದ್ಧವೇ ಪ್ರತಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. 

ಮುಡಾ ಹಗರಣ: ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅಳಿಯಗೂ 19 ಬದಲಿ ಸೈಟ್?

ಕರ್ತವ್ಯ ಲೋಪ ಎಸಗಿರುವ ಮುಡಾದ ಈ ಹಿಂದಿನ ಇಬ್ಬರು ಆಯುಕ್ತರು ಹಾಗೂ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮುಡಾ ಹಗರಣ ಸಂಬಂಧ ಈಗಾಗಲೇ ಇಡಿ ಎಂಟ್ರಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಸಿಬಿಐ ತನಿಖೆಗೆ ಮುಂದಾಗಬಹುದು. ಸಿಬಿಐ ಪ್ರವೇಶಿಸಿದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗಬಹುದು ಎಂದು ಹೇಳಿದರು. 

ಬಿಜೆಪಿ ನಿರ್ಲಕ್ಷ್ಯ ಮಾಡಿತು: 

40% ಕಮಿಷನ್ ಆರೋಪ ನಿರಾಧಾರ ಎಂದು ಲೋಕಾಯುಕ್ತ ವರದಿಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಆಗ ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಮಾಡಿತ್ತು. ಆದರೆ, ಕಾಂಗ್ರೆಸ್ ಮಾಡಿದ ಆರೋಪಗಳನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿತು. ಕಾಂಗ್ರೆಸ್ ಮಾಡಿದ ಸುಳ್ಳು ಆರೋಪಕ್ಕೆ ನಾವು ಅಂದೇ ಕೌಂಟರ್‌ ಕೊಡಬೇಕಿತ್ತು. ಆದರೆ, ಆಗ ನಾವು ನಿರ್ಲಕ್ಷ್ಯ ಮಾಡಿದೆವು. ಪರಿಣಾಮ ನಾವು 66 ಸ್ಥಾನಕ್ಕೆ ಕುಸಿದು, ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿತು. ನಾವು ಕಾಂಗ್ರೆಸ್ ಗೆ ಸಮರ್ಥವಾಗಿ ತಿರುಗೇಟು ನೀಡಿದ್ದರೆ ಫಲಿತಾಂಶ ಬಿಜೆಪಿ ಪರವಾಗಿರುತ್ತಿತ್ತು ಎಂದರು. ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳರ್‌ ಪಿಎ ಬಂಧನವಾಗಿದೆ. ಅಷ್ಟರ ಮಟ್ಟಿಗೆ ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಅವರು ಆರೋಪಿಸಿದರು.

ಸಚಿವ ಜಮೀರ್ ಅಹಮದ್‌ ಈಗಲೂ ವರ್ಣಭೇದದ ಬಗ್ಗೆ ಮಾತನಾಡಿದ್ದು ಖಂಡನೀಯ. ಬಣ್ಣದ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅವರನ್ನು ಅಂದೇ ಸಂಪುಟದಿಂದ ಕೈ ಬಿಡಬೇಕಿತ್ತು. ವರ್ಣಭೇದದ ಬಗ್ಗೆ ಮಾತನಾಡಿರುವ ಸಚಿವ ಜಮೀರ್ ಅಹಮದ್‌ ಓರ್ವ ಅವಿವೇಕಿ ಮಂತ್ರಿ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ತಿಳಿಸಿದ್ದಾರೆ.