ಹುಬ್ಬಳ್ಳಿಯಲ್ಲಿ ದೇಶಪಾಂಡೆ ಪ್ರತಿಷ್ಠಾನ ಅತ್ಯುತ್ತಮ ಕೆಲಸ ಮಾಡುತ್ತಿದೆ| ದೇಶಪಾಂಡೆ ಪ್ರತಿಷ್ಠಾನದ ಕೌಶಲ್ಯ ಅಭಿವೃದ್ಧಿ ಕೇಂದ್ರ ಉದ್ಘಾಟಿಸಿದ ಉಪರಾಷ್ಟ್ರಪತಿ| ಇಂಗ್ಲಿಷ್, ಹಿಂದಿ ಕಲಿಯಿರಿ ಆದರೆ ಕನ್ನಡ ಮರೆಯಬೇಡಿ| 

ಹುಬ್ಬಳ್ಳಿ(ಫೆ.02): ನಗರದಲ್ಲಿ ದೇಶಪಾಂಡೆ ಪ್ರತಿಷ್ಠಾನ ಅತ್ಯುತ್ತಮ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯ ಹೊಂದಬೇಕಾದ ಅವಶ್ಯಕತೆಯಿದೆ. ಇಂಗ್ಲಿಷ್, ಹಿಂದಿ ಕಲಿಯಿರಿ ಆದರೆ ಕನ್ನಡ ಮರೆಯಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಭಾನುವಾರ ನಗರದ ದೇಶಪಾಂಡೆ ಪ್ರತಿಷ್ಠಾನದ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಉದ್ಘಾಟಿಸಿದ್ದಾರೆ. 

ಇಂಗ್ಲಿಷ್ ಕಲಿಯಿರಿ ಆದರೆ ಇಂಗ್ಲಿಷರಂತೆ ವರ್ತಿಸಬೇಡಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಕಾರ್ಯಕ್ರಮದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಪ್ರಲ್ಹಾದ್ ಜೋಶಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತೆ ದೊಡ್ಡ ನಾಯಕರಾಗಿ ಬೆಳೆಯಬೇಕೆಂದರೆ ಹಿಂದಿ ಕಲಿಯಬೇಕು. ಏನೇ ಮಾಡಿದರೂ ಆತ್ಮವಿಶ್ವಾಸದಿಂದ ಮಾಡಬೇಕು ಎಂದು ಹೇಳಿದ್ದಾರೆ.