ತುಮಕೂರಿನಲ್ಲಿ ರಾಜೇಶ್ ಗೌಡ ಗೆಲುವು ಸಾಧಿಸುತ್ತಿದ್ದಂತೆ ಮತ್ತೊಂದು ಗೆಲುವು ದೊರೆತಿದೆ.  ಒಂದರ ಮೇಲೊಂದು ಲಕ್ ಒಲಿದಂತಾಗಿದೆ. 

ತಿಪಟೂರು (ನ.12) :  ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಚಿದಾನಂದ ಗೌಡ ಗೆಲುವು ಸಾಧಿಸುವ ಮೂಲಕ ಪಕ್ಷಕ್ಕೆ ಮತ್ತೊಂದು ಗೆಲುವು ಸಿಕ್ಕಿದಂತಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿಸಲೇಹಳ್ಳಿ ಜಗದೀಶ್‌ ಸಂತಸ ವ್ಯಕ್ತಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಚಿದಾನಂದಗೌಡರವರಿಗೆ ತಿಪಟೂರಿನ ಪದವೀಧರ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಗಾಗಿ ದುಡಿದ ಮತ್ತೋರ್ವ ಮುಖಂಡಗೆ ಸಚಿವ ಸ್ಥಾನ : ಸಿಎಂ ಆಪ್ತರಿಂದಲೇ ವಿರೋಧ .

 ಮುಂದಿನ ದಿನಗಳಲ್ಲಿ ಇವರು ಶಿಕ್ಷಣ ಕ್ಷೇತ್ರದಲ್ಲಿರುವ ಸಾಕಷ್ಟುಸಮಸ್ಯೆಗಳನ್ನು ಬಗೆಹರಿಸುವ ಹಾಗೂ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. 

ಇವರ ಗೆಲುವಿಗೆ ಮತ ನೀಡಿದ ಎಲ್ಲಾ ಪದವೀಧರ ಮತದಾರರಿಗೆ ಬಿಸಲೇಹಳ್ಳಿ ಜಗದೀಶ್‌ ಅಭಿನಂದನೆ ಸಲ್ಲಿಸಿದ್ದಾರೆ.