ಈದ್ ಆಚರಣೆ 30 ರಂದು ನಡೆಯಲಿದ್ದು ಹಲವು ಆಚರಣೆಗಳಿಗೆ ನಿಷೇಧ ಹೇರಲಾಗಿದೆ. 

ಚಿಕ್ಕಮಗಳೂರು (ಅ.29) : ರಾಜ್ಯಾದ್ಯಂತ ಅ.30ರಂದು ಈದ್‌ಮಿಲಾದ್‌ ಹಬ್ಬದ ಪ್ರಯುಕ್ತ ಆಚರಿಸಲಾಗುತ್ತಿದ್ದ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ(ಜುಲೂಸ್‌) ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕೋವಿಡ್‌ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿದೆ.

Add Asianetnews Kannada as a Preferred SourcegooglePreferred

ಮೊಹಲ್ಲಾದಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಸೀದಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್‌-19 ಶಿಷ್ಟಾಚಾರದೊಂದಿಗೆ ಸಾಕಷ್ಟುಮುನ್ನೆಚ್ಚರಿಕಾ ಕ್ರಮಗಳ ಜತೆಗೆ ಮಾಸ್ಕ್‌ ಧರಿಸಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದ್ ಮಿಲಾದ್ - ಭಾರತದಲ್ಲಿ ಹಬ್ಬದ ದಿನ, ಸಮಯ: ಆಚರಣೆಯ ಮಹತ್ವವೇನು ?

ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಡಿಜಿಟಲ್‌ ಸೌಂಡ್‌ ಸಿಸ್ಟಂ(ಡಿಜೆ) ಬಳಸುವುದನ್ನು ನಿಷೇಧಿಸಲಾಗಿದೆ ಹಾಗೂ 60 ವರ್ಷ ಮೇಲ್ಪಟ್ಟನಾಗರಿಕರು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು. ಖಬರ್‌ಸ್ತಾನ್‌ ಒಳಗೊಂಡಂತೆ ಯಾವುದೇ ತೆರೆದ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಮತ್ತು ಈ ಕುರಿತು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ತಿಳಿಸಿದ್ದಾರೆ.