Asianet Suvarna News Asianet Suvarna News

ಕನ್ನಡಿಗರ ಹಿರಿಮೆ ಹೆಚ್ಚಿಸಿದ ಖರ್ಗೆ ಗೆಲುವಿಗೆ ಆಂಜನೇಯ ಸಂತಸ

ಹಿರಿಯ ನಾಯಕ, ಮುತ್ಸದ್ಧಿ, ಅನುಭವಿ ಸಂಸದೀಯ ಪಟು ಅಜಾತಶತ್ರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಭಾರಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕನ್ನಡಿಗರ ಹಿರಿಮೆ ಹೆಚ್ಚಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟಿದ್ದಾರೆ.

Chitradurga Former Minister Anjaneya express happiness for selection of Mallikarjun kharge as a AICC leader akb
Author
First Published Oct 19, 2022, 7:23 PM IST

ಚಿತ್ರದುರ್ಗ: ಹಿರಿಯ ನಾಯಕ, ಮುತ್ಸದ್ಧಿ, ಅನುಭವಿ ಸಂಸದೀಯ ಪಟು ಅಜಾತಶತ್ರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಭಾರಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕನ್ನಡಿಗರ ಹಿರಿಮೆ ಹೆಚ್ಚಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರ ನಾಯಕ, ಚಿತ್ರದುರ್ಗ ಜಿಲ್ಲೆಯವರೇ ಆದ ಎಸ್.ನಿಜಲಿಂಗಪ್ಪ ಬಳಿಕ ಜಗತ್ತಿನಲ್ಲಿ ದೊಡ್ಡ ಇತಿಹಾಸ, ಸ್ವಾತಂತ್ರೃ ಹೋರಾಟದ ಹಿನ್ನೆಲೆ ಹೊಂದಿರುವ ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಕರ್ನಾಟಕ ರಾಜ್ಯಕ್ಕೆ ಲಭಿಸಿರುವುದು ಕನ್ನಡಿಗರಿಗೆ ಹೆಮ್ಮೆ ವಿಷಯ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

ಶಾಸಕರು(MLA), ಸಂಸದರು (MP) ಹಾಗೂ ರಾಜ್ಯ, ಕೇಂದ್ರ ಸರ್ಕಾರದಲ್ಲಿ ಮಂತ್ರಿಗಳಾಗಿ ದಶಕಗಳ ಕಾಲ ಆಡಳಿತ ನಡೆಸಿದ ಹಾಗೂ ವಿಧಾನಸಭೆ, ಲೋಕಸಭೆ(Lokasbha), ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ, ವಿರೋಧ ಪಕ್ಷಗಳ ನಾಯಕರಿಂದಲೂ ಮೆಚ್ಚುಗೆ ಗಳಿಸಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾಗಿದ್ದ ವೇಳೆ ಕಾರ್ಮಿಕರ ಹಿತಕ್ಕಾಗಿ ಮಾಡಿದ ಯೋಜನೆಗಳು ಅದ್ವಿತೀಯವಾಗಿವೆ. ಜೊತೆಗೆ ಹೈದರಬಾದ್ ಕರ್ನಾಟಕಕ್ಕೆ (Hyderabad Karnataka) 371 ಜೆ ವಿಶೇಷ ಸೌಲಭ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ (Kalyana Karnataka Development)ಕೇಂದ್ರದಿಂದ ಅನುದಾನದ ಸುರಿಮಳೆಯನ್ನೇ ಕೇಂದ್ರ ಸುರಿಸುವಂತೆ ಮಾಡಿದವರಲ್ಲಿ ಖರ್ಗೆ ಪ್ರಮುಖರಾಗಿದ್ದಾರೆ.

Congress Election: ಮಲ್ಲಿಕಾರ್ಜುನ್‌ ಖರ್ಗೆ ಕಾಂಗ್ರೆಸ್‌ನ ನೂತನ ಅಧ್ಯಕ್ಷ; ಈ ಸ್ಥಾನ ಪಡೆದ ಎರಡನೇ ಕನ್ನಡಿಗ

ಪ್ರಸ್ತುತ ತೀವ್ರ ಕುತೂಹಲ ಕೆರಳಿಸಿದ್ದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಶಶಿ ತರೂರು ಇಬ್ಬರು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಚುನಾವಣೆ ಎದುರಿಸಿ, ಇದರಲ್ಲಿ ಕರ್ನಾಟಕ ರಾಜ್ಯದ ಖರ್ಗೆ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ರಾಜ್ಯ, ರಾಷ್ಟ್ರ ರಾಜಕಾಣದಲ್ಲಿ ಬದಲಾವಣೆ ಮುನ್ಸೂಚನೆಗೆ ಮುನ್ನುಡಿ ಬರೆದಿದೆ. ಉತ್ತರ ಭಾರತದವರೇ ಹೆಚ್ಚಾಗಿ ರಾಷ್ಟ್ರ ರಾಜಕಾರಣದಲ್ಲಿ ಮಿಂಚುವ ಸಂದರ್ಭ, ಎಐಸಿಸಿ ಅಧ್ಯಕ್ಷರಾಗಿ ಎಸ್.ನಿಜಲಿಂಗಪ್ಪ (S.Nijalingappa), ಪ್ರಧಾನ‌ ಮಂತ್ರಿಯಾಗಿ ಹೆಚ್.ಡಿ ದೇವೇಗೌಡರ (Devegowda) ಬಳಿಕ ಅತ್ಯುನ್ನತ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಖರ್ಗೆ ಅಲಂಕರಿಸುತ್ತಿರುವ ಸಂಭ್ರಮಕ್ಕೆ ಕಾರಣವಾಗಿದೆ.

ಮೊದಲು ದೇಶ, ನಂತರ ಪಕ್ಷ, ಬಳಿಕ ರಾಜಕಾರಣ, ಇದೆಲ್ಲದರ ನಂತರ ವೈಯಕ್ತಿಕ ಹಿತಾಸಕ್ತಿ ಎಂಬ ಸಿದ್ಧಾಂತದಲ್ಲಿ 50 ವರ್ಷ ಸುಧೀರ್ಘ ರಾಜಕಾರಣ ಮಾಡಿದ ಖರ್ಗೆ ಅವರಿಂದ ರಾಜ್ಯಕ್ಕೆ ಈಗಾಗಲೇ ಅಪಾರ ಕೊಡುಗೆ ಲಭಿಸಿದ್ದು, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಈ ಸಂದರ್ಭ ಖರ್ಗೆ ಅವರಿಂದ ಇನ್ನೂ ಹೆಚ್ಚು ಯೋಜನೆಗಳು ರಾಜ್ಯಕ್ಕೆ ಲಭಿಸುವ ಸಾಧ್ಯತೆ ಹೆಚ್ಚು ಇದೆ.

137 ವರ್ಷಗಳ Congress ಏಳುಬೀಳು: 2ನೇ ಬಾರಿ ಕನ್ನಡಿಗರಿಗೆ ಚುಕ್ಕಾಣಿ ಅವಕಾಶ..!

ನಮ್ಮಂತಹ ಅನೇಕರ ಬೆಳವಣಿಗೆಯಲ್ಲಿ ಆಸ್ಕರ್ ಫರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ ಅವರ ಸಹಕಾರ ಅಪಾರವಾಗಿದ್ದು, ಪ್ರಸ್ತುತ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಪಕ್ಷ ನಿಷ್ಠ ನಮ್ಮಂತಹ ಅನೇಕರಿಗೆ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇವರ ನಾಯಕತ್ವದಲ್ಲಿ ಪಕ್ಷ ಬಲಿಷ್ಠಗೊಳ್ಳಲಿದ್ದು, ಸರ್ವ ಸಮುದಾಯದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಹಾಗೂ ಸಂಸತ್‌ನಲ್ಲಿ ಜನವಿರೋಧಿ ನೀತಿಗಳಿಗೆ ಕಡಿವಾಣ ಹಾಕಲು ಸಹಕಾರಿ ಆಗಲಿದೆ ಎಂದು ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios