ಚಿತ್ರದುರ್ಗದ ಹೊಸದುರ್ಗದಲ್ಲಿ ಬಕ್ರೀದ್ ಹಬ್ಬದ ಸಂದರ್ಭ ನೆರೆ ಸಂತ್ರಸ್ತರಿಗಾಗಿ 23,500 ರೂಪಾಯಿ ದೇಣಿಗೆ ಸಂಗ್ರಹಿಸಲಾಯಿತು. ಜತೆಗೆ ಉತ್ತರ ಕರ್ನಾಟಕದ ಜನರು ಸಂಕಷ್ಟದಲ್ಲಿದ್ದು, ಈ ಬಾರಿಯ ಹಬ್ಬ ಸರಳವಾಗಿ ಆಚರಿಸಿ ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂದು ಧರ್ಮಗುರುಗಳು ಸಮುದಾಯಕ್ಕೆ ಸಲಹೆ ನೀಡಿದರು.

ಚಿತ್ರದುರ್ಗ(ಆ.13): ಹೊಸದುರ್ಗ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಸೋಮವಾರ ಬಕ್ರಿದ್‌ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.

Add Asianetnews Kannada as a Preferred SourcegooglePreferred

ಹಬ್ಬದ ಅಂಗವಾಗಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಿಂದ ಮೆರವಣಿಗೆಯ ಮೂಲಕ ಗೌಸಿಯಾ ಶಾದಿ ಮಹಲ್‌ ಪಕ್ಕದಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯಗಳನ್ನು ಕೋರಿದರು.

ಪ್ರವಾಹದಲ್ಲಿ ಕೊಚ್ಚಿ ಹೋಯ್ತು ವಿದ್ಯಾರ್ಥಿನಿ ಕನಸು!

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಭೀಕರ ಪ್ರವಾಹದಿಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ನೆರವು ನೀಡಲು 23,500 ಸಾವಿರ ರು. ಸಂಗ್ರಹಿಸಲಾಯಿತು. ಜತೆಗೆ ಉತ್ತರ ಕರ್ನಾಟಕದ ಜನರು ಸಂಕಷ್ಟದಲ್ಲಿದ್ದು, ಈ ಬಾರಿಯ ಹಬ್ಬ ಸರಳವಾಗಿ ಆಚರಿಸಿ ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂದು ಧರ್ಮಗುರುಗಳು ಸಮುದಾಯಕ್ಕೆ ಸಲಹೆ ನೀಡಿದರು.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ವೇಳೆ ಜಾಮೀಯ ಮಸೀದಿ ಅಧ್ಯಕ್ಷ ಮುಜೀದ್‌ ಬಾಷಾ, ಕಾರ್ಯದರ್ಶಿ ಸೈಪುಲ್ಲಾ, ಸಮಸ್ತ ಮುಸ್ಲಿಂ ಬಾಂಧವರು ಹಾಜರಿದ್ದರು.