Asianet Suvarna News Asianet Suvarna News

ಚಾಮರಾಜನಗರ: ಹರಳುಕೋಟೆ ಆಂಜನೇಯನ ಆಶೀರ್ವಾದ ಪಡೆದ ಸಿಜೆಐ ಚಂದ್ರಚೂಡ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರೆ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥನಿಗೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ವಿಶೇಷ ಪೂಜೆ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಬಂದು ಅರಣ್ಯ ಸೌಂದರ್ಯ ವೀಕ್ಷಿಸಿದ್ದಾರೆ. 

CJI DY Chandrachud Perform Pooja in Haralukote Anjaneya Swamy Temple in Charamarajanagar grg
Author
First Published Oct 4, 2024, 8:01 PM IST | Last Updated Oct 4, 2024, 8:02 PM IST

ಚಾಮರಾಜನಗರ(ಅ.04): ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಇಂದು(ಶುಕ್ರವಾರ) ಕುಟುಂಬ ಸಮೇತರಾಗಿ ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. 

ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರೆ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥನಿಗೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ವಿಶೇಷ ಪೂಜೆ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಬಂದು ಅರಣ್ಯ ಸೌಂದರ್ಯ ವೀಕ್ಷಿಸಿದ್ದಾರೆ. 

ಚಾಮರಾಜನಗರ: ಸಿಸಿ ಕ್ಯಾಮೆರಾ ತೆಗಿದಿದ್ರೆ ಪರಿಣಾಮ ಭೀಕರ, ಎಚ್ಚರಿಕೆ ಪತ್ರ ಬರೆದ ಖದೀಮರು, ಆತಂಕದಲ್ಲಿ ಜನತೆ!

ಚಾಮರಾಜನಗರದ ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿ ಹನುಮನ ದರ್ಶನ ಪಡೆದು ಅರ್ಚನೆ ಮಾಡಿಸಿದರು. ಹರಳುಕೋಟೆ ಆಂಜನೇಯಸ್ವಾಮಿ ದೇಗುಲವು ಬಬ್ರುವಾಹನನಿಂದ ಸ್ಥಾಪಿತಗೊಂಡ ಮೂರ್ತಿ ಎಂಬ ನಂಬಿಕೆ ಇದ್ದು ಪುರಾಣ ಐತಿಹ್ಯ ಹಾಗೂ ಇತಿಹಾಸ ಇದೆ.‌ 

Latest Videos
Follow Us:
Download App:
  • android
  • ios