ಮೈಸೂರು ಜಿಲ್ಲಾಧಿಕಾರಿ ಹಾಗೂ ರಾಜಕಾರಣಿಗಳ ನಡುವಿನ ತಿಕ್ಕಾಟ ಜೋರಾಗಿದೆ. ಕಾರ್ಯಕ್ರಮವೇ ಕ್ಯಾನ್ಸಲ್ ಆಗಿದೆ

ಮೈಸೂರು (ಡಿ.01): ಜಿಲ್ಲೆಯ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಜಿಲ್ಲಾಧಿಕಾರಿಯವರ ಸ್ಪಂದನಾ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. 

ಮೈಸೂರು ಡಿಸಿ ರೋಹಿಣಿ ವರ್ಗಾವಣೆ - ಕರ್ತವ್ಯದಿಂದ ವಜಾ?

ಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು ತಿಳಿಸಿದ್ದೇನೆ. ಈಗ ಸ್ಪಂದನ ಕಾರ್ಯಕ್ರಮ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಈ ವೇಳೆ ಜನರ ಅಹವಾಲಗಳನ್ನು ಕೇಳಲಾಗುತ್ತದೆ ಎಂದು ತಿಳಿಸಿದರು.