ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಮತ್ತು ಪರಿಹಾರ ಕಾರ್ಯಗಳು ತ್ವರಿತ ಮತ್ತು ಪಾರದರ್ಶಕವಾಗಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಮತ್ತು ಪರಿಹಾರ ಕಾರ್ಯಗಳು ತ್ವರಿತ ಮತ್ತು ಪಾರದರ್ಶಕವಾಗಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಹೊರವಲಯದಲ್ಲಿ ನಡೆದ ಬಿಜೆಪಿಯ ಮಹತ್ವದ ಸಭೆಯ ನಡುವೆಯೇ ಜಿಲ್ಲಾಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಮತ್ತು ಪರಿಹಾರ ಕಾರ್ಯಗಳ ಕುರಿತು ಸಲಹೆ, ಸೂಚನೆಗಳನ್ನು ನೀಡಿದರು.
ಮಳೆ ಹಾನಿ, ಕಡಲ್ಕೊರೆತ ಪರಿಶೀಲಿಸಿದ ಸಿಎಂ: ಕೊಡಗು, ದ.ಕ., ಉಡುಪಿ ಜಿಲ್ಲೆಗಳಲ್ಲಿ ಸಂಚಾರ
ಮಳೆಯಿಂದ ಹಾನಿಯಾದ ಮನೆಗಳಿಗೆ ತುರ್ತು ಪರಿಹಾರ 10 ಸಾವಿರ ರು. ನೀಡಿದ ನಂತರ ಮನೆಗಳ ನಿರ್ಮಾಣವನ್ನು ತಕ್ಷಣ ಕೈಗೊಳ್ಳಬೇಕು. ರಸ್ತೆ, ಸೇತುವೆ, ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಬೇಕು. ಮಹಾರಾಷ್ಟ್ರದ ಕೊಯ್ನಾ ಜಲಾಶಯಗಳಿಂದ ನೀರಿನ ಮಟ್ಟದ ಬಗ್ಗೆ ನಿಗಾವಹಿಸಲು ಅಲ್ಲಿನ ಅಧಿಕಾರಿಗಳ ಜತೆ ಸಂಪರ್ಕದಲ್ಲಿರಬೇಕು. ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಜನರ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು. ಬೆಳೆಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸಮೀಕ್ಷೆ ಸರಿಯಾಗಬೇಕು. ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು, ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಉಡುಪಿಯಲ್ಲಿ ಸಿಎಂ ಮಳೆಹಾನಿ ವೀಕ್ಷಣೆ: ಮೊದಲ ಹಂತದಲ್ಲಿ 500 ಕೋಟಿ ಬಿಡುಗಡೆ
ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಮತ್ತು ಮಳೆ ಮುನ್ಸೂಚನೆಯನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮಗಳ ಜತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು. ಪರಿಹಾರ ಕಾರ್ಯಗಳು ತ್ವರಿತ ಮತ್ತು ಪಾರದರ್ಶಕವಾಗಿರಬೇಕು. ಭೂಕುಸಿತದ ಸಾಧ್ಯತೆಗಳುಳ್ಳ ಪ್ರದೇಶದಲ್ಲಿ ರಸ್ತೆಗಳನ್ನು ತೆರವುಗೊಳಿಸಬೇಕು ಮತ್ತು ಕೂಡಲೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು. ಗ್ರಾಮಪಂಚಾಯತ್ ಮಟ್ಟದಲ್ಲಿ ಟಾಸ್್ಕಪೋರ್ಸ್ ರಚಿಸುವುದು ಹಾಗೂ ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ನಿಯಂತ್ರಣ ಕೊಠಡಿಗಳು ಭಾರಿಮಳೆ ಮತ್ತು ಪ್ರವಾಹ ಸ್ಥಿತಿಯ ಕುರಿತ ಅಹವಾಲುಗಳಿಗೆ ಸ್ಪಂದಿಸಬೇಕು ಎಂದರು.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳಿಗೆ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವನ್ನು ಒದಗಿಸಿ ತೊಂದರೆಗೀಡಾದ ಪ್ರದೇಶಗಳಿಗೆ ತಕ್ಷಣವೇ ತಲುಪಲು ಕ್ರಮ ವಹಿಸಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಮೇಲ್ವಿಚಾರಣೆ ಕೈಗೊಳ್ಳಬೇಕು. ಸಂಬಂಧಿಕರ ಮನೆಗಳಿಗೆ ತೆರಳಿರುವ ಸಂತ್ರಸ್ತರಿಗೆ ಪಡಿತರ ಕಿಟ್ ಅನ್ನು ಕಂದಾಯ ಇಲಾಖೆ ನೀಡುವ ಪಟ್ಟಿಯಂತೆ ಒದಗಿಸಬೇಕು. ವಿದ್ಯುತ್ ಸಂಪರ್ಕ ಪುನಸ್ಥಾಪಿಸಲು ಅತಿ ಹೆಚ್ಚಿನ ಆದ್ಯತೆ ನೀಡಿ ಬಾಧಿತ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಶ್ರಮವಹಿಸಬೇಕು. ಜಿಲ್ಲಾಡಳಿತದ ವತಿಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ಕೆರೆ ಏರಿಗಳನ್ನು ತಾತ್ಕಾಲಿಕವಾಗಿ ತಕ್ಷಣವೇ ಸರಿಪಡಿಸಿ, ಶಾಶ್ವತ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.
ಪ್ರಕೃತಿ ವಿಕೋಪ ಪರಿಹಾರದಡಿ ಕೈಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಕಳೆದ ಮೂರು ವರ್ಷದಲ್ಲಿ ಅವಧಿಯ ಮನೆಗಳ ನಿರ್ಮಾಣ ಕಾರ್ಯ ಮತ್ತು ಅವುಗಳನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಸಬೇಕು. ಬೆಳೆ ಹಾನಿ ಕುರಿತು ತನಿಖೆ ಕೈಗೊಂಡು ಒಂದು ತಿಂಗಳಲ್ಲಿ ಇನ್ಪುಟ್ ಸಬ್ಸಿಡಿ ವಿತರಿಸಬೇಕು ಮತ್ತು ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರಿಗೆ ಸರ್ಕಾರಿ ಆದೇಶದಲ್ಲಿ ನೀಡಿರುವ ಆಹಾರ ಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದರು.