ಈ ಬಾರಿ ದೇಶದಲ್ಲಿಕೊರೋನಾ ಆತಂಕವಿದ್ದು, ದಸರಾ ಆಚರಣೆ ಹೇಗಿರಲಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸುಳಿವನ್ನು ನೀಡಿದ್ದಾರೆ.
ಸರಗೂರು (ಮೈಸೂರು) (ಆ.22): ಕೋವಿಡ್ ಕರಿನೆರಳು ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದರಸಾ ಮೇಲೂ ಬೀಳಲಿದೆ. ಪ್ರತಿಬಾರಿ ಅದ್ಧೂರಿಯಾಗಿ ನಡೆಯುವ ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಹೇಗೆ ಆಚರಿಸಬಹುದು ಎಂಬ ಕುರಿತು ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Add Asianetnews Kannada as a Preferred Source

ಬೀಚನಹಳ್ಳಿಯ ಕಬಿನಿ ಜಲಾಶಯ ಬಳಿ ಶುಕ್ರವಾರ ಮಾತನಾಡಿ, ದಸರಾ ಮಹೋತ್ಸವವನ್ನು ಸರಳವಾಗಿ ಹೇಗೆ ಆಚರಿಸಬೇಕೆಂಬ ಕುರಿತು ಚರ್ಚೆ ನಡೆಸಲಾಗುವುದು.
ಸಾರ್ವಜನಿಕವಾಗಿ ಆಚರಿಸಲ್ಪಡುವ ಹಬ್ಬಗಳಿಗೆ ರಾಜ್ಯ ಸರ್ಕಾರ ಕಡಿವಾಣ ..?...
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜತೆಗೆ ಈ ಕುರಿತು ಮಾತುಕತೆ ನಡೆಸಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆಸಲಾಗುವುದು ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.
ಕೆಆರ್ಎಸ್ಗೆ ಬಾಗೀನ ಅರ್ಪಿಸಲು ಆಗಮಿಸಿದ್ದ ವೇಳೆ ಈ ವಿಚಾರ ತಿಳಿಸಿದರು.
