ಅಪಘಾತ: ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು|ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅರ್ಜನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ| ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಇಂಡಿ(ಜೂ.28): ತಾಲೂಕಿನ ಅರ್ಜನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಗೂಡ್ಸ್ ವಾಹನ ಮತ್ತು ಲಾರಿ ಮಧ್ಯೆ ಮುಖಾಮುಖಿಯಾಗಿ ಅಪಘಾತವಾಗಿ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
Add Asianetnews Kannada as a Preferred Source

ಧಾರವಾಡ ಜಿಲ್ಲೆಯ ಈರಣ್ಣ ಎಸ್. ನೀರಲಕಟ್ಟಿ (30) ಹಾಗೂ ಬೆಳಗಾವಿ ಜಿಲ್ಲೆಯ ಸವದತ್ತಿಯ ಅನೀಲ ಕರಿಗೌಡ (28) ಮೃತಪಟ್ಟ ದುರ್ದೈವಿಗಳು.
ಇನ್ನೆರಡು ವರ್ಷದಲ್ಲಿ ವಿಜಯಪುರ ಗಾರ್ಡ್ನ್ ಸಿಟಿ: ಶಾಸಕ ಯತ್ನಾಳ
ಗೂಡ್ಸ್ ವಾಹನ ವಿಜಯಪುರದಿಂದ ಮಹಾರಾಷ್ಟ್ರದ ಸೋಲಾಪುರ ಕಡೆಗೆ ಹಾಗೂ ಲಾರಿ ಸೋಲಾಪುರ ಕಡೆಯಿಂದ ವಿಜಯಪುರ ಕಡೆಗೆ ಹೊರಟಿತ್ತು. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
