ಜನರಿಂದ ಹಣ ಪೀಕುವ ಪೊಲೀಸ್ ಪೇದೆ! ಲಂಚ ಸ್ವೀಕರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆ! ಪೇದೆ ಪರುಶರಾಮ್ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ
ವಿಜಯಪುರ(ಆ.28): ಪೊಲೀಸ್ ಠಾಣೆಗೆ ದೂರು ನೀಡಲು ಬಂದವರಿಂದ ಹಣ ಪೀಕುವ ಧನದಾಹಿ ಪೇದೆ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಪರಶುರಾಮ್ ಕಟಬರ್, ದೂರು ನೀಡಲು ಬಂದ ಸಾವರ್ವಜನಿಕರಿಂದ ಲಂಚ ಪಡೆಯುತ್ತಾನೆ ಎಂಬ ಅರೋಪ ಕೇಳಿ ಬಂದಿದೆ.
ಪರುಶರಾಮ್ ಸಾರ್ವಜನಿಕರಿಂದ ಲಂಚ ಪಡೆಯುತ್ತಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಪರುಶರಾಮ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
