Mandya : ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸ ಇದೆ : ಮತ್ತೆ ಚುನಾವಣೆ ಸ್ಪರ್ಧೆ

: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಳವಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಬಿಜೆಪಿ ಮುಖಂಡ ಮುನಿರಾಜು ಹೇಳಿದರು.

Confident About Getting BJP Ticket Says Muniraju snr

ಮಳವಳ್ಳಿ: (ಅ.22): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಳವಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಬಿಜೆಪಿ ಮುಖಂಡ ಮುನಿರಾಜು ಹೇಳಿದರು.

ತಾಲೂಕಿನ ಹುಸ್ಕೂರು ಮತ್ತು ಕುಲುಮೇದೊಡ್ಡಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013ರ ವಿಧಾನಸಭಾ ಚುನಾವಣೆಯಲ್ಲಿ (Election)  ಕೆಜೆಪಿಯಿಂದ ಸ್ಪರ್ಧೆ ಮಾಡಲಾಗಿತ್ತು. ಅಂದು ನಿರೀಕ್ಷೆಗೂ ಮೀರಿ ಕ್ಷೇತ್ರದ ಜನರು ಬೆಂಬಲ ಕೊಟ್ಟಿದ್ದರು ಎಂದರು.

ಮಳವಳ್ಳಿ (Malavalli)  ಕ್ಷೇತ್ರದ ಜನರ ಸೇವೆ ಮಾಡುವ ಹಂಬಲವಿದೆ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದರಿಂದ ಜನಾಭಿಪ್ರಾಯವನ್ನು ಸಂಗ್ರಹಿಸಲು ತಾಲೂಕಿನಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಯಲ್ಲಿ ಕುಂಠಿತ ಕಂಡಿರುವ ಮಳವಳ್ಳಿ ಕ್ಷೇತ್ರವನ್ನು ಹೆಚ್ಚಿನ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮನ್ನು ನಿರೀಕ್ಷಿಸುತ್ತಿದ್ದಾರೆ. ಪ್ರತಿ ಗ್ರಾಮಕ್ಕೂ ಹೋದ ವೇಳೆ ಅಭೂತ ಪೂರ್ವ ಬೆಂಬಲ ನೀಡುತ್ತಿದ್ದಾರೆ. ಗೆಲ್ಲುವ ವಿಶ್ವಾಸವಿದೆ ಎಂದರು.

ಬಿಜೆಪಿ ಪಕ್ಷದ ವರಿಷ್ಠರು ತಮಗೆ ಟಿಕೆಟ್‌ ನೀಡುವ ಭರವಸೆ ನೀಡಿದ್ದಾರೆ. ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇನೆ. ಪಕ್ಷಾತೀತವಾಗಿ ತನ್ನನ್ನು ಬೆಂಬಲಿಸುವುದಾಗಿ ಮುಖಂಡರು ಭರವಸೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ವಿಶ್ವಾಸ ತೆಗೆದುಕೊಂಡು ಚುನಾವಣೆಯನ್ನು ಎದುರಿಸುವುದಾಗಿ ಹೇಳಿದರು.

ನೂರಾರು ಕಾರ್ಯಕರ್ತರೊಂದಿಗೆ ತಾಲೂಕಿನ ಹುಸ್ಕೂರಿನಿಂದ ಕುಲುಮೆದೊಡ್ಡಿಯವರೆಗೆ ಎತ್ತಿನಗಾಡಿ ಮೆರವಣಿಗೆ ಮೂಲಕ ಮುನಿರಾಜು ಅವರನ್ನು ಕರೆತರಲಾಯಿತು. ಮುನಿರಾಜು ಅವರೇ ಗಾಡಿ ಹೊಡೆಯುವುದರ ಮೂಲಕ ಗಮನ ಸೆಳೆದರು. ರೈತ ಸಂಘ ಮತ್ತು ಹುಸ್ಕೂರು ಕುಲುಮೆದೊಡ್ಡಿ ಗ್ರಾಮಸ್ಥರು ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹೊಟ್ಟೆಮಾರಣ್ಣ, ಯಜಮಾನ ಅಲೆಮನೆ ತಮ್ಮಯ್ಯ, ಚಿಕ್ಕಮಾದಯ್ಯ ಪಟೇಲರು, ಕರಿಯಪ್ಪ ಸೇರಿದಂತೆ ಇತರರು ಇದ್ದರು.

 ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಹೊಸಬರಿಗೆ ಮಣೆ ಹಾಕದೇ ನಿಷ್ಠ, ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್‌ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.

ಪಟ್ಟಣದಲ್ಲಿ ಕಿಯೋನಿಕ್ಸ್ ನಿರ್ದೇಶಕ ಎಚ್‌.ಎನ್‌.ಮಂಜುನಾಥ್‌ ನೇತೃತ್ವದಲ್ಲಿ ನಡೆದ ಮೂಲ ಬಿಜೆಪಿ (BJP)  ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಪ್ರಾಮಾಣಿಕ, ನಿಷ್ಠೆಯುಳ್ಳವರು ಹಾಗೂ ನಿರಂತರವಾಗಿ ಕಾರ್ಯಕರ್ತರ ಸಮಸ್ಯೆ ಆಲಿಸುವ ಮಂದಿಗೆ ಟಿಕೆಟ್‌ (Ticket)  ನೀಡಬೇಕು. ವಿಧಾನಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತಂತೆ ವಿಸ್ತೃತ ಚರ್ಚೆ ನಡೆಯಿತು.

ಕಳೆದ 31 ವರ್ಷಗಳ ಹಿಂದಿನ ಆಯೋಧ್ಯೆ ರಾಮಮಂದಿರದ ಹೋರಾಟದ ಕಾಲದಿಂದಲೂ ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗೆ ಪಕ್ಷವನ್ನು ಸದೃಢವಾಗಿ ಕಟ್ಟಲು ಮುಂದಾಗಬೇಕಿದೆ ಎಂಬ ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾದವು.

ಎಚ್‌.ಎನ್‌.ಮಂಜುನಾಥ್‌ ಮಾತನಾಡಿ, ಪಿಎಲ್ಡಿ ಬ್ಯಾಂಕ್‌, ಕಸಬಾ ಸೊಸೈಟಿ, ಗೃಹ ನಿರ್ಮಾಣ ಸಹಕಾರ ಸಂಘ, ಹಿರೇಮರಳಿ ಗ್ರಾಪಂ, ತಾಲೂಕು ಪಂಚಾಯ್ತಿಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಟಿಎಪಿಸಿಎಂಎಸ್‌ ಚುನಾವಣೆಯಲ್ಲಿ ಕಡೆ ದಿನ ಅಭ್ಯರ್ಥಿ ಕಣಕ್ಕಿಳಿಸಿ ಕಡಿಮೆ ಅಂತರ ಸೋಲಾಯಿತು. ಜತೆಗೆ ಕಳೆದ ಜಿಪಂ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲುಂಟಾಗಿದೆ ಎಂದರು.

ಆಯೋಧ್ಯೆ ರಾಮಮಂದಿರದ ಹೋರಾಟ ಆರಂಭವಾದ ದಿನದಿಂದಲೂ ಪಕ್ಷದಲ್ಲಿ ನಿಷ್ಠೆಯಿಂದ ಮೂಲ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಜತೆಗೆ ನಾನೂ ಕೂಡ 31 ವರ್ಷಗಳಿಂದಲೂ ಕೇಸರಿ ಟವೆಲ… ಹಾಕಿ, ಪಕ್ಷದ ಬ್ಯಾನರ್‌ , ಬಂಟಿಂW್ಸ… ಕಟ್ಟಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಯಾವ ಪಕ್ಷದವರು ಬಂದರೂ ಇದೇ ಕೇಸರಿ ಟವೆಲ… ಹಾಕಿಕೊಂಡಿದ್ದೇವೆ. ಬಿಜೆಪಿ ಬಿಟ್ಟು ಯಾವ ಪಕ್ಷಕ್ಕೂ ಹೋಗಿಲ್ಲ. ಕೇಸರಿ ಟವೆಲ… ಹಾಕಿಕೊಂಡು ನಾವು ಸುಮ್ಮನೇ ಕೂರಬೇಕೆ ಎಂದು ಪ್ರಶ್ನಿಸಿದರು.

ಕೆಲ ದಿನಗಳ ಹಿಂದೆ ನಾನೇ ಬಿಜೆಪಿ ಅಭ್ಯರ್ಥಿ, ನನ್ನನ್ನು ಬೆಂಬಲಿಸಿ ಎನ್ನುವ ಕರಪತ್ರಗಳು ಎಲ್ಲೆಡೆ ಹರಿದಾಡಿದೆ. ಪಕ್ಷ ಇನ್ನೂ ಯಾರು ಅಭ್ಯರ್ಥಿ ಎಂಬುದನ್ನು ತೀರ್ಮಾನಿಸಿಲ್ಲ. ಜತೆಗೆ ಯಾರಿಗೂ ಟಿಕೆಚ್‌ ಭರವಸೆ ನೀಡಿಲ್ಲ. ಈ ಮಧ್ಯೆ ನಾನೇ ಅಭ್ಯರ್ಥಿ ಎಂದರೆ ನಾವು ಯಾರೂ ಇಲ್ವ. ಕೇಸರಿ ಟವೆಲ… ಹಾಕಿಕೊಂಡು ತಿರುಗಲು ನಮಗೆ ಹುಚ್ಚ. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ನಿರ್ಣಯದ ಜತೆಗೆ ಪಕ್ಷ ಯಾರಿಗೆ ಟಿಕೆಚ್‌ ನೀಡಿದರೂ ಅದಕ್ಕೆ ಬದ್ದನಿದ್ದು, ನಮ್ಮೆಲ್ಲರ ವಿಶ್ವಾಸ ಗಳಿಸಿ ಟಿಕೆಚ್‌ ತರುವ ಯಾರೇ ಅಭ್ಯರ್ಥಿಯಾದರೂ ಅವರ ಪರ ಪ್ರಚಾರ ನಡೆಸುವೆ ಎಂದರು.

ಕಾರ್ಯಕರ್ತರ ಒತ್ತಾಸೆಯಂತೆ 2004ರಲ್ಲಿ ಅಭ್ಯರ್ಥಿಯಾಗಿದ್ದೆ. 54ಸಾವಿರ ಮತ ಪಡೆದವರು ಶಾಸಕರಾಗಿದ್ದರು. ಈಗ ಗೆಲ್ಲುವವರ ಮತಗಳಿಕೆ ಹೆಚ್ಚಾಗುತ್ತಿದೆ. ಬಳಿಕ 2008ರಲ್ಲಿ ನನ್ನ ಹೆಸರು ಪ್ರಸ್ತಾಪವಾದರೂ ಮಾಜಿ ಶಾಸಕ ಕೆಂಪೇಗೌಡರಿಗೆ ಟಿಕೆಚ್‌ ನೀಡಲಾಯಿತು. 2013ರಲ್ಲಿ ಜಿ.ಎಂ.ರವೀಂದ್ರ ಅವರಿಗೆ ಟಿಕೆಚ್‌ ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios