ಮಾಜಿ ಸಿಎಂ ಹಾಗೂ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಯಾಕೆ ನಮ್ಮನ್ನು ದ್ವೇಷಿಸುತ್ತಾರೋ. ಪಕ್ಷದಲ್ಲಿದ್ದುಕೊಂಡು ನಾವು ಪಟ್ಟ ಪಾಡು ಅಷ್ಟಿಷ್ಟಲ್ಲ ಎಂದು  ಹೇಳಿದ್ದಾರೆ. 

ಕುದೂರು (ಮಾ.31): ಮಾಜಿ ಸಿಎಂ ಕುಮಾ​ರ​ಸ್ವಾಮಿ ಅವ​ರನ್ನು ಮುಖ್ಯ​ಮಂತ್ರಿ ಮಾಡಲು ನಾವು​ಗಳು ಪಟ್ಟಪಾಡು ದೇವ​ರಿಗೇ ಗೊತ್ತು. ಆದರೂ ಅವರು ನಮ್ಮನ್ನು ಏಕೆ ದ್ವೇಷಿ​ಸು​ತ್ತಾರೆ ಎಂಬುದು ಇಂದಿಗೂ ಗೊತ್ತಾ​ಗಿಲ್ಲ ಎಂದು ಮಾಜಿ ಸಚಿವ ​ಎನ್‌.ಚಲು​ವ​ರಾ​ಯ​ಸ್ವಾಮಿ ಹೇಳಿ​ದರು.

Add Asianetnews Kannada as a Preferred SourcegooglePreferred

ಇಲ್ಲಿನ ಶ್ರೀ ರಾಮಲೀಲಾ ಮೈದಾನದಲ್ಲಿ ಮಾಗಡಿ ಯೂತ್‌ ಕಾಂಗ್ರೆಸ್‌ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ಎಚ್‌ಸಿಬಿ ಕಪ್‌ ಕ್ರಿಕೆಚ್‌ ಟೂರ್ನಿಮೆಂಟ್‌ನಲ್ಲಿ ಭಾಗವಹಿಸಿ ಮಾತನಾಡಿ, ನಾವುಗಳು ಕುಮಾ​ರ​ಸ್ವಾಮಿ ಅವರ ಕುರಿತು ಪ್ರೀತಿಯಿಂದ ಕೆಲಸ ಮಾಡಿದ್ದೇವೆ. ಆದರೂ ಅವರು ಚಲುವರಾಯಸ್ವಾಮಿ, ಬಾಲಕೃಷ್ಣ ಮೋಸ ಮಾಡಿದರು ಎಂದು ಹೇಳುತ್ತಾರೆ. ನಾನಂತೂ ಅವರ ಕುರಿತು ಕೇವಲವಾಗಿ ಮಾತನಾಡುವುದಿಲ್ಲ. ಆದರೆ ಅವರು ಮಾತ್ರ ಯಾಕೆ ನಮ್ಮನ್ನು ದ್ವೇಷಿಸುತ್ತಾರೆ ಎಂಬುದು ಗೊತ್ತಿಲ್ಲ ಎಂದರು.

ಮಾಜಿ ಶಾಸಕ ಬಾಲಕೃಷ್ಣರವರ ರಾಜಕಾರಣ ಪ್ರಾರಂಭವಾಗಿದ್ದು, ದೇವೇಗೌಡರಿಂದ ಅಲ್ಲ. ಅಂದು ಜನತಾದಳಕ್ಕೆ ತಾಲೂಕಿನಲ್ಲಿ ಕೇವಲ 4 ಸಾವಿರ ಮತಗಳು ಇದ್ದ ಸಂದರ್ಭದಲ್ಲಿ ಬಾಲಕೃಷ್ಣರವರು 60 ಸಾವಿರ ಮತಗಳನ್ನು ದೇವೇಗೌಡರ ಬುಟ್ಟಿಗೆ ಹಾಕಿಸಿದರು.

ಕಾಂಗ್ರೆಸ್‌ಗೆ ಶುರುವಾಗಿದೆ ಸೋಲಿನ ಭೀತಿ .

ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮುಲಾಯಂಸಿಂಗ್‌ ಯಾದವ್‌ ಸಮ್ಮುಖದಲ್ಲಿ ಉತ್ತರಹಳ್ಳಿ ಶ್ರೀನಿವಾಸ್‌ ಅವರನ್ನು ಇದೇ ಬಾಲಕೃಷ್ಣ ಪಕ್ಷಕ್ಕೆ ಸೇರ್ಪಡೆ ಮಾಡಿ ಇವರಿಬ್ಬರು ಅವಿರತವಾಗಿ ಕೆಲಸ ಮಾಡದೇ ಹೋಗಿದ್ದರೆ ದೇವೇಗೌಡರು ಒಂದು ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಚಲು​ವ​ರಾ​ಯ​ಸ್ವಾಮಿ ಹೇಳಿ​ದ​ರು.

ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತನಾಡಿ, ಬಿಜೆಪಿ ನೀರಿನ ಮೇಲಿನ ಗುಳ್ಳೆ ಇದ್ದಂತೆ. ಕಾಂಗ್ರೆಸ್‌ ಗರಿಕೆಯ ಬೇರುಗಳಿದ್ದಂತೆ. ಮತ್ತೆ ಮತ್ತೆ ಚಿಗುರುತ್ತಲೇ ಇರುತ್ತದೆ. ಜೆಡಿಎಸ್‌ ಎಂದಿಗೂ ಅಧಿಕಾರಕ್ಕೆ ಬಾರದಿರುವ ಪಕ್ಷ. ಬಿಜೆಪಿಯ ಸಿಡಿ ಪ್ರಕರಣ ರಾಜ್ಯವನ್ನು ತಲೆತಗ್ಗಿಸುವಂತೆ ಮಾಡಿದೆ. ಬಿಜೆಪಿ ಪ್ರತಿ ಬಾರಿ ಅಧಿಕಾರಕ್ಕೆ ಬಂದಾಗಲೂ ಇಂತಹ ಪ್ರಕರಣಗಳು ದಾಖಲಾಗುತ್ತವೆ. ಬಿಜೆಪಿ ಸರ್ಕಾ​ರದ ನಡ​ವ​ಳಿ​ಕೆ​ಯಿಂದ ನಾಡಿನ ಜನರು ರೋಸಿ ಹೋಗಿ​ದ್ದಾರೆ ಎಂದ​ರು.

ಮಾಗಡಿ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ವಿನಯ್‌ ಗೌಡ ಮಾತನಾಡಿ, ಯುವಕರು ಅಣುಶಕ್ತಿಗಿಂತಲೂ ಶಕ್ತಿಯುತವಾದದ್ದು, ಯುವಕರ ಸಂಘಟನೆಯಿಂದ ತಾಲೂಕಿನಲ್ಲಿ ಹಲವಾರು ರೀತಿಯಲ್ಲಿ ಬಡವರಿಗೆ ಅನುಕೂಲವಾಗುವ ಕೆಲಸಗಳಿಗೆ ಚಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಸಂದ​ರ್ಭ​ದಲ್ಲಿ ಕುಸುಮಾ ಡಿ.ಕೆ.ರವಿ, ಸಂಚಾಲಕ ಶಶಾಂಕ್‌, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್‌, ಬಿಡದಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಟರಾಜ…, ಗ್ರಾಮಪಂಚಾಯಿತಿ ಅಧ್ಯಕ್ಷೆ, ಭಾಗ್ಯಮ್ಮ ಚಿಕ್ಕರಾಜು, ಸದಸ್ಯ ಟಿ.ಹನುಮಂತರಾಯಪ್ಪ, ಟಿಎಪಿಎಂಎಸ್‌ ಮಾಜಿ ಅಧ್ಯಕ್ಷ ಹೊನ್ನಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಲತಾವೆಂಕಟೇಶ್‌, ಶ್ರೀಗಿರಿಪುರ ಪ್ರಕಾಶ್‌, ಚಂದ್ರಶೇಖರ್‌ ಮತ್ತಿತರರು ಹಾಜರಿದ್ದರು.