ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವೂ ಸಾಕಷ್ಟು ಗೊಂದಲ ಮೂಡಿಸಿದ್ದಾಗಿ ನಾಯಕರೋರ್ವರು ಹೇಳಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಲು ಆಗ್ರಹಿಸಿದ್ದಾರೆ.
ತುಮಕೂರು (ಮಾ.07): ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ತನಿಖೆಯಾಗಿ ಒಂದು ಹಂತಕ್ಕೆ ಬರಬೇಕಾಗಿದೆ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ತಿಪಟೂರು ತಾಲೂಕು ನೊಣವಿನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಈಗಾಗಲೇ ನೀಡಿರುವ ರಾಜಿನಾಮೆಯನ್ನು ಸರ್ಕಾರ ಸ್ವೀಕಾರ ಮಾಡಿದೆ ಎಂದ ಅವರು ಈ ವಿಚಾರವೇ ಸಾಕಷ್ಟುಗೊಂದಲ ಮೂಡಿಸುತ್ತಿದ್ದು ವಿಚಾರಣೆಯಾಗಬೇಕು ಎಂದರು.
ರಾಸಲೀಲೆ ಕೇಸ್ : ರಾಜಕಾರಣಿಗಳ ಬಗ್ಗೆ ಹೇಸಿಗೆ ಬರುವಂತಾಯ್ತು
ಸಾರ್ವಜನಿಕವಾಗಿ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪರ ವಹಿಸಲು ಹಾಗೂ ಬೆಂಬಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಆರು ಮಂದಿ ಸಚಿವರು ಯಾವ ವಿಚಾರಕ್ಕೆ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ತಿಳಿಯದೇ ಮಾತನಾಡುವುದು ಸೂಕ್ತವಲ್ಲ ಎಂದರು. ನ್ಯಾಯಾಲಯಕ್ಕೆ ಹೋಗಿರುವ ಅವಶ್ಯಕತೆ ಇತ್ತಾ ಎನ್ನುವುದು ಎನ್ನುವುದರ ಬಗ್ಗೆ ನಮಗೂ ಗೊಂದಲವಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಎಚ್ಚರದಿಂದ ಇರಬೇಕು. ಎಲ್ಲರಿಗೂ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ ಎಂದರು.
Last Updated Mar 7, 2021, 11:00 AM IST