Asianet Suvarna News Asianet Suvarna News

'ಬಿಜೆಪಿಯವರು ಯಾವ ಮಟ್ಟಕ್ಕೆ ಹೋಗ್ತಾರೆ ಹೇಳಲಾಗದು'

ಬಿಜೆಪಿ ಪಕ್ಷ ಯಾವ ಮಟ್ಟಕ್ಕೆ ಇಳಿಯಲಿದೆ ಎಂದು ಊಹಿಸಲು ಸಾಧ್ಯವಿಲ್ಲ, ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೈ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.

Congress Leader SR Patil Slams BJP Leaders
Author
Bengaluru, First Published Aug 25, 2020, 10:43 AM IST

ಬಾಗಲಕೋಟೆ (ಆ.25): ‘ಬಿಜೆಪಿಯವರು ಯಾವ ಮಟ್ಟಕ್ಕೆ ಹೋಗುತ್ತಾರೆ ಅನ್ನುವುದನ್ನು ಹೇಳೋಕೆ ಸಾಧ್ಯವೇ ಇಲ್ಲ’ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಫೋನ್‌ ಕದ್ದಾಲಿಕೆ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌ ಈ ರೀತಿ ಪ್ರತಿಕ್ರಿಯಿಸಿದ್ದಾರೆ. 

ಸಂವಿಧಾನಾತ್ಮಕವಾಗಿ ಸ್ಥಾಪಿತವಾದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿರುವ ಬಿಜೆಪಿ ಅವರು ಇಡಿ, ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗ ಮಾಡಿದ್ದಾರೆ. 

ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ

ಇಂತಹ ದೊಡ್ಡ ಸಂಸ್ಥೆಗಳನ್ನು ದುರುಪಯೋಗ ಮಾಡಿದವರಿಂದ ಫೋನ್‌ ಕದ್ದಾಲಿಕೆ ವಿಷಯ ಆಶ್ಚರ್ಯವೇನಲ್ಲ ಎಂದು ಟೀಕಿಸಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಫೋನ್‌ ಕದ್ದಾಲಿಕೆಯಾಗುತ್ತಿದೆ ಎಂದು ಆರೋ​ಪಿ​ಸಿ​ದ್ದಾರೆ.

Follow Us:
Download App:
  • android
  • ios