ಕಾಂಗ್ರೆಸ್ ಮುಖಂಡ ಟಿ ಬಿ ಜಯಂದ್ರ ವಿಶ್ವನಾಥ್ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಹೇಳಿದ್ದೇನು..?
ತುಮಕೂರು (ಜ.16) : ಯಾರ ಹತ್ತಿರ ಸಿಡಿ ಇಲ್ಲ ಅಂದರೂ, ನನ್ನ ಸ್ನೇಹಿತ ವಿಶ್ವನಾಥ ಬಳಿ ಸಿಡಿ ಇದ್ದೇ ಇರುತ್ತೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಚಟಾಕಿ ಹಾರಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಿಡಿ ಬಗ್ಗೆ ಯತ್ನಾಳ್ ಕೂಡ ಮಾತನಾಡುತ್ತಿದ್ದಾರೆ. ಸಿಡಿ ಬಗ್ಗೆ ಇಷ್ಟೆಲ್ಲಾ ಬಹಿರಂಗ ಚರ್ಚೆ ಆಗುತ್ತಿದ್ದು ಹೊರಗೆ ಬಂದೇ ಬರುತ್ತದೆ ಎಂದರು.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪಕ್ಷದ ಮುಖಂಡರು ಮಾತನಾಡುತ್ತಿರುವುದನ್ನು ನೋಡಿದರೆ ಅವರ ಬಳಿ ಸಿಡಿ ಇದೆ ಎಂಬುದು ಅರ್ಥವಾಗುತ್ತದೆ ಎಂದರು. ಸಿಡಿಯಲ್ಲಿ ಏನಿದೆ, ಯಾರು ಯಾರು ಪಾತ್ರ ಮಾಡಿದ್ದಾರೆ ನೋಡೋಣ ಎಂದರು.
CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..! ...
ರಾಜ್ಯ ರಾಜಕೀಯದಲ್ಲಿ ಸಿಡಿ ವಿಚಾರ ಸಾಕಷ್ಟು ಚರ್ಚೆಯಾಗುತ್ತಿರವ ಬೆನ್ನಲ್ಲೇ ಈ ರೀತಿಯ ಹೇಳಿಕೆ ನೀಡಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 16, 2021, 1:32 PM IST