*  ಮಹಾನಗರ ಜಿಲ್ಲಾ ಘಟಕಕ್ಕೆ ವರದಿ ಕೇಳಿದ ಕೆಪಿಸಿಸಿ* ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ವಿಧಾನಸಭೆ ಟಿಕೆಟ್‌ಗಾಗಿ ಈಗಿನಿಂದಲೇ ಕಿತ್ತಾಟ* ಡಿಕೆಶಿ ಸಮ್ಮುಖದಲ್ಲೇ ಕಾಂಗ್ರೆಸ್ಸಿಗರ ಕಿತ್ತಾಟ 

ಹುಬ್ಬಳ್ಳಿ(ಆ.01): ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಆಂತರಿಕ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲೇ ಸ್ಥಳೀಯ ಮುಖಂಡರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆಯ ವಿಡಿಯೋ ಇದೀಗ ವೈರಲ್‌ ಆಗಿದೆ.

Add Asianetnews Kannada as a Preferred SourcegooglePreferred

ಸಭೆಯಲ್ಲಿ ವಿದ್ಯಾನಗರ ಬ್ಲಾಕ್‌ ಅಧ್ಯಕ್ಷ ರಜತ್‌ ಉಳ್ಳಾಗಡ್ಡಿಮಠ ವಿರುದ್ಧ ಮಹಾನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ ಗದಿಗೆಪ್ಪಗೌಡರ ಹರಿಹಾಯ್ದರು. ರಜತ್‌ ಅವರು ಡಿ.ಕೆ.ಶಿವಕುಮಾರ್‌, ಲಕ್ಷ್ಮೀ ಹೆಬ್ಬಾಳಕರ್‌ ನನ್ನ ಜೇಬಲ್ಲಿದ್ದು ಈ ಸಲ ತಮಗೆ ಟಿಕೆಟ್‌, ಪಾಲಿಕೆಯಲ್ಲೂ ತಮಗೆ ಬೇಕಾದವರಿಗೆ ಟಿಕೆಟ್‌ ಎಂದೆಲ್ಲ ಹೇಳಿಕೊಂಡು ತಿರುಗುತ್ತಾರೆ ಎಂದು ಏರುಧ್ವನಿಯಲ್ಲಿ ಆರೋಪಿಸಿದರು. ಇದು ಗೊಂದಲಕ್ಕೆ ಕಾರಣವಾಯಿತು. ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ಕೆಪಿಸಿಸಿ ಮಹಾನಗರ ಜಿಲ್ಲಾ ಘಟಕಕ್ಕೆ ವರದಿ ಕೇಳಿದೆ.

ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ

ಈ ಮೂಲಕ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ವಿಧಾನಸಭೆ ಟಿಕೆಟ್‌ಗಾಗಿ ಈಗಿನಿಂದಲೇ ಕಿತ್ತಾಟ ಶುರುವಾದಂತಾಗಿದ್ದು ಸ್ಥಳೀಯ ಕಾಂಗ್ರೆಸ್‌ನಲ್ಲಿನ ಭಿನ್ನಮತ ಮತ್ತೆ ಬೀದಿರಂಪವಾದಂತಾಗಿದೆ.