ಹಣಕ್ಕಾಗಿ ಸ್ಥಾನ ಮಾರಿಕೊಳ್ಳದೆ ಕಾಂಗ್ರೆಸ್‌ನಲ್ಲೇ ಶಾಸಕನಾಗಿ ಉಳಿದಿದ್ದೇನೆ| ಬಿಜೆಪಿ ಶಾಸಕರನ್ನು ಖರೀದಿಸುವ ಪ್ರವೃತ್ತಿಯನ್ನು ಹೊಸದಾಗಿ ಆರಂಭಿಸಿ, ಆಮಿಷಗಳಿಗೆ ಹೆಸರುವಾಸಿಯಾಗಿದೆ| ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ: ಡಿ.ಎಸ್‌.ಹೂಲಗೇರಿ| 

ಮುದಗಲ್‌(ಮಾ.29): ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಾಗ ಅನ್ಯ ಪಕ್ಷಗಳ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸುವ ಪ್ರವೃತ್ತಿಯನ್ನು ಬಿಜೆಪಿ ದೊಡ್ಡ ಅಜೆಂಡಾ ಹಾಕಿಕೊಂಡಿತ್ತು. ಅದರ ಸುಳಿಯಲ್ಲಿ ನನಗೂ ಆಫರ್‌ ಇತ್ತು ಎಂದು ಲಿಂಗಸುಗೂರು ಶಾಸಕ ಡಿ.ಎಸ್‌.ಹೂಲಗೇರಿ ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಸ್ಕಿ ಉಪಚುನಾವಣೆಯ ಮಟ್ಟೂರ ಪಂಚಾಯ್ತಿ ವ್ಯಾಪ್ತಿಯ ಹಳ್ಳಿ-ಮಟ್ಟೂರ ಗ್ರಾಮದಲ್ಲಿ ಪ್ರಚಾರದಲ್ಲಿ ಮಾತನಾಡಿ, ಬಸನಗೌಡರಿಗೆ ಬಿಜೆಪಿ ಮೋಸ ಮಾಡಿದೆ. ಅವರನ್ನು ಪಕ್ಷಕ್ಕೆ ಸೇರಿಸುವಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದೇನೆ. ಅವರು ತಮಗೆ ದೂರಾದರೂ ಪಕ್ಕದ ಕ್ಷೇತ್ರ ಲಿಂಗಸುಗೂರ ಶಾಸಕನಾಗಿರುವುದರಿಂದ ತಮ್ಮ ಸಮಸ್ಯೆಗೆ ನಾನೂ ಸ್ಪಂದಿಸುತ್ತೇನೆ, ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸಲು ಕೋರಿದ್ದಾರೆ.

ಮಸ್ಕಿ ಉಪಚುನಾವಣೆಯಲ್ಲಿ ಕೋಟ್ಯಧೀಶರ ಫೈಟ್‌..!

ಕಳೆದ ಬಾರಿ ಪ್ರತಾಪಗೌಡರಿಗೆ ಕಾಂಗ್ರೆಸ್‌ನಿಂದ ಗೆದ್ದರೂ ಅವರು ಹಣ, ಅಧಿಕಾರಕ್ಕಾಗಿ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿ ಉಪಚುನಾವಣೆ ತರಲು ಕಾರಣೀಬೂತರಾಗಿದ್ದಾರೆ. ಅವರೇ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆ ಸಮಯದಲ್ಲಿ ನನಗೂ ಆಮಿಷ ನೀಡಿದ್ದರು. ನನ್ನ ಸಮುದಾಯದ ಸ್ವಾಮೀಜಿಗಳ ಸಲಹೆ ಮೇರೆಗೆ ಹಣಕ್ಕಾಗಿ ಸ್ಥಾನ ಮಾರಿಕೊಳ್ಳುವುದು ಸರಿಯಲ್ಲವೆಂದು ಕಾಂಗ್ರೆಸ್‌ನಲ್ಲೇ ಶಾಸಕನಾಗಿ ಉಳಿದಿದ್ದೇನೆ. ಬಿಜೆಪಿ ಶಾಸಕರನ್ನು ಖರೀದಿಸುವ ಪ್ರವೃತ್ತಿಯನ್ನು ಹೊಸದಾಗಿ ಆರಂಭಿಸಿ, ಆಮಿಷಗಳಿಗೆ ಹೆಸರುವಾಸಿಯಾಗಿದೆ ಎಂದು ದೂರಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಪಾಟೀಲ್‌, ಶರಣಪ್ಪ ಮೇಟಿ, ಚನ್ನವೀರಪ್ಪ, ಮಲ್ಲಪ್ಪ, ಪರಮಣ್ಣ, ಬಸವರಾಜ ಇದ್ದರು.