ರಾಯಚೂರು ಜಿಲ್ಲೆ ಮುದಗಲ್‌ನ ಅಂಕಲಿಮಠದ ಕಿರಿಯ ಶ್ರೀಗಳಾದ ಫಕೀರೇಶ್ವರ ಸ್ವಾಮೀಜಿ ಅವರಿಗೆ ಸೇರಿದ ಸರ್ವೆ ಸಂಖ್ಯೆ 242/8ರ 19 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್‌ ಹೆಸರು ಸೇರಿದೆ. ಮುದಗಲ್ ಹೋಬಳಿಯ ಒಟ್ಟು 30 ಎಕರೆ ಭೂಮಿಯ ಪಹಣಿ ದಾಖಲೆಯಲ್ಲಿ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಇಲ್ಲಿನ ಹಲವು ರೈತರ ಜಮೀನಿನ ಆಸ್ತಿ ಪತ್ರದಲ್ಲೂ ವಕ್ಫ್‌ ಮಂಡಳಿ ಹೆಸರು ಬಂದಿದೆ. 

ಲಿಂಗಸುಗೂರು(ರಾಯಚೂರು)(ನ.17): ಮಾಜಿ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬದ ಬಳಿಕ ಇದೀಗ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಆಂಜನೇಯ ಮತ್ತು ಕಾಂಗ್ರೆಸ್ ಎಂಎಲಿ ಶರಣಗೌಡ ಪಾಟೀಲ ಬಯ್ಯಾಪುರ ಅವರಿಗೂ ಇದೀಗ ವಕ್ಫ್‌ ಆಸ್ತಿ ಬಿಸಿ ತಟ್ಟಿದೆ. ಮುದಗಲ್‌ನಲ್ಲಿರುವ ಇವರಿಗೆ ಸೇರಿದ ಆಸ್ತಿಯ ಪಹಣಿ ದಾಖಲೆಯ ಲಂನಂ.11ರಲ್ಲಿ ವಕ್ಸ್ ಹೆಸರು ಸೇರಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ರ ಪುತ್ರ ಆಂಜನೇಯ ಅವರು ಮುದಗಲ್ ಹೋಬಳಿಯಲ್ಲಿ 2016-17ರಲ್ಲಿ ಒಂದು ಎಕರೆ ಭೂಮಿ ಖರೀದಿಸಿದ್ದರು. ಇದೀಗ ಆ ಜಮೀನಿನ ಪಹಣಿ ದಾಖಲೆಯ ಕಾಲಂ ನಂಬ‌ರ್ 11ರಲ್ಲಿ ಏಕಾಏಕಿ ವಕ್ಫ್‌ ಹೆಸರು ಏಕಾಏಕಿ ನಮೂದಾಗಿರುವುದು ಬೆಳಕಿಗೆ ಬಂದಿದೆ. ಅದೇ ರೀತಿ ಮುದುಗಲ್ ಹೋಬಳಿಯಲ್ಲಿರುವ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಅವರಿಗೆ ಸೇರಿದ ಒಂದು ಎಕರೆ ಭೂಮಿಯ ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾಗಿದೆ. ಮುದಗಲ್ ಹೋಬಳಿ ಸರ್ವೆ ನಂಬರ್ 242/4ರ ಈ ಜಮೀನನ್ನು ಅವರು 2007-08ರಲ್ಲಿ ಖರೀದಿಸಿದ್ದರು. ಆಗ ಪಹಣಿಯಲ್ಲಿ ವಕ್ಫ್‌ ಎಂದು ಉಲ್ಲೇಖಿಸರಲಿಲ್ಲ. ಆದರೆ ಇದೀಗ ಏಕಾಏಕಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದು ವಕ್ಫ್‌ ಆಸ್ತಿ ಗದ್ದಲದ ಬಳಿಕ ಪರಿಶೀಲಿಸಿದಾಗ ಗಮನಕ್ಕೆ ಬಂದಿದೆ.

ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

ಶರಣಗೌಡ ಪಾಟೀಲ್ ಬಯ್ಯಾಪುರ ಕಂಗಾಲು ನಮ್ಮದು ಹಿಂದೆ ಇನಾಂ ಭೂಮಿ ಆಗಿತ್ತು. 15 ವರ್ಷ ಹಿಂದೆ ಆ ಜಮೀನು ಖರೀದಿಸಿದ್ದು, ಈಗ ಏಕಾಏಕಿ ವಕ್ಫ್‌ ಹೆಸರು ಯಾಕೆ ನಮೂದಾಗಿದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್ ಎಂಎಲ್‌ಸಿ ಶರಣಗೌಡ ಬಯ್ಯಾಪುರ ತಿಳಿಸಿದ್ದಾರೆ. 

ಸ್ವಾಮೀಜಿ ಆಸ್ತಿಗೂ ವಕ್ಫ್‌ ಎಂದು ಎಂಟ್ರಿ 

ರಾಯಚೂರು ಜಿಲ್ಲೆ ಮುದಗಲ್‌ನ ಅಂಕಲಿಮಠದ ಕಿರಿಯ ಶ್ರೀಗಳಾದ ಫಕೀರೇಶ್ವರ ಸ್ವಾಮೀಜಿ ಅವರಿಗೆ ಸೇರಿದ ಸರ್ವೆ ಸಂಖ್ಯೆ 242/8ರ 19 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್‌ ಹೆಸರು ಸೇರಿದೆ. ಮುದಗಲ್ ಹೋಬಳಿಯ ಒಟ್ಟು 30 ಎಕರೆ ಭೂಮಿಯ ಪಹಣಿ ದಾಖಲೆಯಲ್ಲಿ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಇಲ್ಲಿನ ಹಲವು ರೈತರ ಜಮೀನಿನ ಆಸ್ತಿ ಪತ್ರದಲ್ಲೂ ವಕ್ಫ್‌ ಮಂಡಳಿ ಹೆಸರು ಬಂದಿದೆ.