ನನ್ನ ತಾಯಿ ಯಾವತ್ತೂ ಸಾರ್ವಜನಿಕ ಜೀವನಕ್ಕೆ ಪ್ರವೇಶ ಮಾಡಿದವರಲ್ಲ. ಈಗ ವಿನಾಕಾರಣ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ಇದರಿಂದ ತಾಯಿಗೆ ಮೊದಲು ಬೇಸರವಾಗಿದ್ದು ಸತ್ಯ: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು(ಆ.20): ನನ್ನ ತಂದೆ ಮಾಡಿರುವುದರಲ್ಲಿ ತಪ್ಪಿಲ್ಲ ಎಂಬುದು ನನ್ನ ತಾಯಿಗೂ ಗೊತ್ತಿದೆ. ಆದರೂ, ತಮ್ಮ ವಿಚಾರದಲ್ಲಿ ಇವರ ಮೇಲೆ ಆರೋಪ ಬರುತ್ತಿದೆಯಲ್ಲಾ ಎಂಬ ಬೇಸರವೂ ಇದೆ. ಏನೇ ಇರಲಿ, ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Add Asianetnews Kannada as a Preferred SourcegooglePreferred

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ನನ್ನ ತಾಯಿ ಯಾವತ್ತೂ ಸಾರ್ವಜನಿಕ ಜೀವನಕ್ಕೆ ಪ್ರವೇಶ ಮಾಡಿದವರಲ್ಲ. ಈಗ ವಿನಾಕಾರಣ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ಇದರಿಂದ ತಾಯಿಗೆ ಮೊದಲು ಬೇಸರವಾಗಿದ್ದು ಸತ್ಯ. ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಿ ಪ್ರಜಾಪ್ರಭುತ್ವ ನಾಶಪಡಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿವೆ. ಕಾನೂನು ಬಾಹಿರ ಮತ್ತು ಸಂವಿಧಾನಕ್ಕೆ ವಿರೋಧವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ಸಿದ್ಧರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.

ಸಿಎಂ ಸಿದ್ದರಾಮಯ್ಯನವರೇ ಹಠಮಾರಿತನ ಬಿಟ್ಟು ರಾಜೀನಾಮೆ ನೀಡಿ: ಎಚ್.ವಿಶ್ವನಾಥ್

ಇದರ ವಿರುದ್ಧ ನಾವು ಕಾನೂನು ಮೂಲಕವೇ ಹೋರಾಟ ಮಾಡುತ್ತೇವೆ ಎಂದು ಹೇಳಿದರು.