Mandya: ಹಾದಿ ಬೀದಿಯಲ್ಲಿ ತಿರುಗಾಡುತ್ತಿರುವವರಿಗೆ ಟಿಕೆಟ್ ನೀಡುವ ಸಂಸ್ಕೃತಿ ಇಲ್ಲ
ಪಕ್ಷಕ್ಕೆ ಯಾವುದೇ ಕೊಡುಗೆ ನೀಡದೆ ಹಾದಿ ಬೀದಿಯಲ್ಲಿ ತಿರುಗಾಡುತ್ತಿರುವವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ಎಂದು ಕೆಪಿಸಿಸಿ ಸದಸ್ಯ ಗುರುಚರಣ್ ಕದಲೂರು ಉದಯ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಮದ್ದೂರು: (ನ.01): ಪಕ್ಷಕ್ಕೆ ಯಾವುದೇ ಕೊಡುಗೆ ನೀಡದೆ ಹಾದಿ ಬೀದಿಯಲ್ಲಿ ತಿರುಗಾಡುತ್ತಿರುವವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ಎಂದು ಕೆಪಿಸಿಸಿ ಸದಸ್ಯ ಗುರುಚರಣ್ ಕದಲೂರು ಉದಯ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ತಾಲೂಕಿನ ಸೋಮನಹಳ್ಳಿಯ ತಮ್ಮ ನಿವಾಸದಲ್ಲಿ ಬೆಸಗರಹಳ್ಳಿ ಹಾಲು (Milk) ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷ-ಉಪಾಧ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಬಿ.ಎನ್.ಮಧು ಹಾಗೂ ಲತಾ ಮಣಿ ಅವರನ್ನು ಅಭಿನಂದಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವೆ ಹೆಸರಿನಲ್ಲಿ ಕಳೆದ ಕೆಲವು ತಿಂಗಳಿಂದ ಕ್ಷೇತ್ರ ಸಂಚಾರ ಮಾಡುತ್ತಿರುವ ವ್ಯಕ್ತಿಯೊಬ್ಬರು ರಾಜಕಾರಣಕ್ಕೆ ಬಂದು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಗೊಂದಲ ಮೂಡಿಸುತ್ತಿದ್ದಾರೆ ಎಂದು ಕದಲೂರು ಉದಯ… ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಸಮಾಜಸೇವೆಯೊಂದಿಗೆ ರಾಜಕಾರಣಕ್ಕೆ ಬಂದು ಚುನಾವಣೆಗೆ ಸ್ಪರ್ಧಿಸುವುದು ಅವರ ವಿವೇಚನೆಗೆ ಬಿಟ್ಟವಿಚಾರ. ಆದರೆ ಅವರು, ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಾರೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು.
ನಮ್ಮ ದೊಡ್ಡಪ್ಪ, ಮಾಜಿ ಸಿಎಂ ಎಸ್.ಎಂ. ಕೃಷ್ಣ ಮತ್ತು ಎಸ್.ಎಂ.ಶಂಕರ್ ಕೊಡುಗೆ ಕಾಂಗ್ರೆಸ್ ಪಕ್ಷಕ್ಕೆ ಅಪಾರವಾಗಿದೆ. ಇವರ ಕುಡಿಯಾಗಿರುವ ನನಗೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ಘೋಷಣೆ ಮಾಡಿದ್ದಾರೆ. ಅವರ ಅಣತಿಯಂತೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಮುಖಂಡರಾದ ಗೋಪಿ ಇದ್ದರು.
ಟಿಕೆಟ್ಗಾಗಿ ಅರ್ಜಿ ಆಹ್ವಾನ
ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ರಾಜ್ಯ ಕಾಂಗ್ರೆಸ್ ಅಧಿಕೃತ ಚಾಲನೆ ನೀಡಿದ್ದು, ನ.5ರಿಂದ ನ.15ರವರೆಗೆ 224 ಕ್ಷೇತ್ರಗಳಿಂದಲೂ ಅರ್ಹ ಆಕಾಂಕ್ಷಿಗಳಿಂದ ಟಿಕೆಟ್ಗೆ ಅರ್ಜಿ ಆಹ್ವಾನಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಪಕ್ಷದ ಕೆಲಸ ಮಾಡದವರಿಗೆ ಟಿಕೆಟಿಲ್ಲ: ಮತ್ತೊಮ್ಮೆ ಶಾಸಕರಿಗೆ ಎಚ್ಚರಿಕೆ ನೀಡಿದ ಡಿಕೆಶಿ
ಭಾನುವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭದ ಸಿದ್ಧತೆ ಕುರಿತು ಚರ್ಚಿಸಲು ಹಿರಿಯ ನಾಯಕರ ಸಭೆ ನಡೆಯಿತು. ಈ ವೇಳೆ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ.
ಕಳೆದ ಉಪ ಚುನಾವಣೆಯಲ್ಲಿ ಟಿಕೆಟ್ಗಾಗಿ ಅರ್ಜಿ ಸಲ್ಲಿಸುವವರು ಪಕ್ಷದ ನಿಧಿಗೆ 1 ಲಕ್ಷ ರು. ನೀಡಬೇಕು ಎಂದು ನಿಯಮ ರೂಪಿಸಲಾಗಿತ್ತು. ಇದೀಗ ಮುಂದಿನ ಸಾರ್ವತ್ರಿಕ ಚುನಾವಣೆಗೆ ಎಷ್ಟುಶುಲ್ಕ ನಿಗದಿ ಮಾಡಬೇಕು. ಯಾವ್ಯಾವ ದಾಖಲೆಗಳನ್ನು ಒದಗಿಸಬೇಕು ಎಂಬಿತ್ಯಾದಿ ಅಂಶಗಳ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನ.4ರಿಂದ ಸುರ್ಜೇವಾಲಾ ಸರಣಿ ಸಭೆ:
ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿರುವ ಪರಿಸ್ಥಿತಿ ಹಾಗೂ ಯಾರಿಗೆ ಟಿಕೆಟ್ ನೀಡಿದರೆ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು ಎಂಬ ಬಗ್ಗೆ ಚರ್ಚಿಸಲು ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳ ಜತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನೇರ ಸಭೆ ಹಮ್ಮಿಕೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಮನ್ವಯ ಸಭೆ ಹೆಸರಿನಲ್ಲಿ ನ.4 ರಂದು ಶುಕ್ರವಾರ ಕೋಲಾರ, ವಿಜಯಪುರ, ಉತ್ತರ ಕನ್ನಡ, ನ.5 ರಂದು ಹಾಸನ, ದಕ್ಷಿಣ ಕನ್ನಡ, ಬೆಳಗಾವಿ ನಗರ ಮತ್ತು ಗ್ರಾಮೀಣ, ಚಿಕ್ಕೋಡಿ, ನ.8 ರಂದು ಬೆಂಗಳೂರು ನಗರ, ದಕ್ಷಿಣ, ಉತ್ತರ ಜಿಲ್ಲಾ ಕಾಂಗ್ರೆಸ್, ಬೆಂಗಳೂರು ಗ್ರಾಮಾಂತರ, ನ.9 ರಂದು ರಾಯಚೂರು, ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಉ.ಕರ್ನಾಟಕದಲ್ಲಿ ಕಾಂಗ್ರೆಸ್ 3 ಪ್ರತ್ಯೇಕ ರಾರಯಲಿ
ಬೆಂಗಳೂರು: ಭಾನುವಾರ ನಡೆದ ಕೆಪಿಸಿಸಿ ಸಭೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿರುವ ಯಾತ್ರೆಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆದಿದೆ. ಈ ವೇಳೆ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನೀಡಿರುವ ಟಾಸ್್ಕನಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮೂರು ಪ್ರತ್ಯೇಕ ರಾರಯಲಿಗಳು ನಡೆಯಬೇಕು ಎಂದು ಸಭೆಗೆ ತಿಳಿಸಿದ್ದಾರೆ.
ದಮ್ ಇದ್ದರೆ ಬಿಜೆಪಿ ವಿಜಯ ಯಾತ್ರೆ ತಡೀರಿ: ಸಿಎಂ ಬೊಮ್ಮಾಯಿ
ಮೊದಲಿಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯದ ವಿರುದ್ಧ ಟ್ರ್ಯಾಕ್ಟರ್ ರಾರಯಲಿ ನಡೆಸಲಾಗುವುದು. ಬಳಿಕ ಮಹದಾಯಿ ಯೋಜನೆ ಅನುಷ್ಠಾನ ಮಾಡದ ಬಗ್ಗೆ ಪ್ರತ್ಯೇಕ ರಾರಯಲಿ (ಟ್ರಾಕ್ಟರ್ ರಾರಯಲಿ ಅಲ್ಲ) ನಡೆಸಬೇಕು. ಬಳಿಕ ರಾಜ್ಯ ಬಿಜೆಪಿ ಸರ್ಕಾರವು 371-ಜೆ ವಿಶೇಷ ಸ್ಥಾನಮಾನಕ್ಕೆ ವಿರುದ್ಧವಿದೆ ಎಂಬುದನ್ನು ಜನರಿಗೆ ತಿಳಿಸಲು ಪ್ರತ್ಯೇಕ ಯಾತ್ರೆ ನಡೆಸಬೇಕು. ಈ ವೇಳೆ ಕೇಂದ್ರವು 371-ಜೆ ಜಾರಿಗೆ ತರಲು ಹೊರಟಾಗ ಎಲ್.ಕೆ. ಅಡ್ವಾಣಿ ಹಾಗೂ ಎ.ಬಿ. ವಾಜಪೇಯಿ ಅವರು ವಿರೋಧ ವ್ಯಕ್ತಪಡಿಸಿದ್ದರು. ಮೊದಲಿನಿಂದಲೂ ಬಿಜೆಪಿಯು ಇದರ ವಿರುದ್ಧವಿದೆ. ಇದರ ನಡುವೆಯೂ ಕಾಂಗ್ರೆಸ್ 371-ಜೆ ಸ್ಥಾನಮಾನ ನೀಡಿತು. ಹೀಗಾಗಿ ಬಿಜೆಪಿಯು 371-ಜೆ ಯನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡುತ್ತಿದೆ. ಸೂಕ್ತವಾಗಿ ಅನುಷ್ಠಾನ ಮಾಡದೆ ಈ ಭಾಗದ ಜನರಿಗೆ ದ್ರೋಹ ಬಗೆಯುತ್ತಿದೆ ಎಂದು ಬಿಂಬಿಸಬೇಕು ಎಂದು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.