ಬಿಜೆಪಿಯವರು ಅಧಿಕಾರಕ್ಕಾಗಿ ಸದನದಲ್ಲೇ ಮಲಗುತ್ತಾರೆ, ಪ್ರತಿಭಟಿಸುತ್ತಾರೆ, ಗಲಾಟೆ ಮಾಡುತ್ತಾರೆ. ಆದರೆ ನೆರೆ ಸಂತ್ರಸ್ತರ ಪರಿಹಾರಕ್ಕೆ ಇವೆಲ್ಲವನ್ನು ಮಾಡುವುದಿಲ್ಲ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌  ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು(ಅ.02): ಬಿಜೆಪಿಯವರು ಅಧಿಕಾರಕ್ಕಾಗಿ ಸದನದಲ್ಲೇ ಮಲಗುತ್ತಾರೆ, ಪ್ರತಿಭಟಿಸುತ್ತಾರೆ, ಗಲಾಟೆ ಮಾಡುತ್ತಾರೆ. ಆದರೆ ನೆರೆ ಸಂತ್ರಸ್ತರ ಪರಿಹಾರಕ್ಕೆ ಇವೆಲ್ಲವನ್ನು ಮಾಡುವುದಿಲ್ಲ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌ ಪ್ರಶ್ನಿಸಿದ್ದಾರೆ.

Add Asianetnews Kannada as a Preferred SourcegooglePreferred

ಮೈಸೂರಿನಲ್ಲಿ ಮಾತನಾಡಿದ ಅವರು, ವಿಧಾನದಲ್ಲಿ ಧಾರ್ಮಿಕ ಸ್ವಾತಂತ್ರ್ಯವಿದ್ದರೂ ಮಹಿಷ ದಸರಾ ತಡೆಯಲು ಇವರು ಯಾರು? ಅಧಿಕಾರ ಕೊಟ್ಟವರು ಯಾರು? ಮಹಿಷ ಆಚರಣೆಯನ್ನು ನಿಲ್ಲಿಸಿ ಆಚರಣೆಯ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದಾರೆ ಎಂದು ಹರಿಹಾಯ್ದರು.

ಬಿಜೆಪಿ ಅಣತಿಯಂತೆ ಚುನಾವಣಾ ಆಯೋಗದ ನಡೆ: ಆರೋಪ

ಭೈರಪ್ಪರಿಂದ ಇಂತಹ ಮಾತು ನಿರೀಕ್ಷಿಸಿರಲಿಲ್ಲ

ದೊಡ್ಡ ಬುದ್ಧಿಜೀವಿಯಾದ ಡಾ.ಎಸ್‌.ಎಲ್‌. ಭೈರಪ್ಪ ಅವರಿಂದ ಹೆಣ್ಣು ಮಕ್ಕಳ ಬಗೆಗಿನ ಮಾತುಗಳನ್ನು ನಿರೀಕ್ಷಿಸಿರಲಿಲ್ಲ. ಅವರ ಮಾತುಗಳು ಕೆಳವರ್ಗದ ಹೆಣ್ಣು ಮಕ್ಕಳು ಆತ್ಮಸ್ಥೈರ್ಯ ಕುಗ್ಗಿಸುವಂತವಾಗಿವೆ. ಅಂತಹ ವೇದಿಕೆಯಲ್ಲಿ ಈ ರೀತಿಯಾಗಿ ಮಾತಾಡುವ ಅವಶ್ಯಕತೆ ಇರಲಿಲ್ಲ ಎಂದು ಕಿಡಿಕಾರಿದರು.

 ನೆರೆ ಪರಿಹಾರ ತರುವಲ್ಲಿ ‘ಪ್ರತಾಪ’ ತೋರಿಸಲಿ: ಸಂಸದಗೆ ಟಾಂಗ್..