ಕೆಪಿಸಿಸಿ ಅಧ್ಯಕ್ಷರಾದ ಬಳಿಕ  ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರ ಹುಟ್ಟೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ರಾಮನಗರ (ಮಾ.15): ಕೆಪಿಸಿಸಿ ಅಧ್ಯಕ್ಷರಾದ ತರುವಾಯ ಡಿ.ಕೆ.ಶಿವಕುಮಾರ್ ತವರು ಕ್ಷೇತ್ರ ಕನಕಪುರದಲ್ಲಿ ಇಂದು ಆಯೋಜನೆಗೊಂಡಿದ್ದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶ ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. 

Add Asianetnews Kannada as a Preferred SourcegooglePreferred

ಕನಕಪುರ ನಗರದ ಮುನ್ಸಿಪಲ್ ಹೈಸ್ಕೂಲ್ ನಲ್ಲಿ ಮಾ. 15 ರಂದು ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಶಾಸಕಿ ಸೌಮ್ಯರೆಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಸಂಸದ ಸುರೇಶ್ , ಮಾಜಿ ಸಂಸದ ಧೃವನಾರಾಯಣ್ ಮತ್ತಿತರರು ಭಾಗವಹಿಸುತ್ತಿದ್ದರು. 

ಕವಟಗಿಮಠ ಮಗಳ ಮದುವೆಗೆ ಜನರನ್ನ ಸೇರಿಸದೇ ಇರೋದೆ ಒಳ್ಳೆಯದು: ಸಿಎಂ..

ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ತವರು ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕರ್ತರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದರು.