* ಗ್ರಾಮದಲ್ಲಿ ಸೋಂಕಿನ ಭೀತಿ * ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ* ಸೆಂಟರ್‌ನಲ್ಲಿ ಎಲ್ಲೆಂದರಲ್ಲಿ ಓಡಾಡುತ್ತಿದ್ದು, ಯಾರ ಮಾತನ್ನೂ ಕೇಳುತ್ತಿರಲಿಲ್ಲ ರೋಗಿ  

ಮೈಸೂರು(ಜೂ.14): ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಅನುಚಿತ ವರ್ತನೆ ತೋರಿದನೆಂದು ಕೊರೋನಾ ಸೋಂಕಿತನನ್ನು ಚಿಕಿತ್ಸೆ ಪೂರ್ಣಗೊಳ್ಳುವ ಮೊದಲೇ ಆತನನ್ನು ಆಟೋವೊಂದರಲ್ಲಿ ಮನೆಗೆ ವಾಪಸ್‌ ಕಳುಹಿಸಿದ್ದು, ಇದೀಗ ಮನೆಯವರು ಹಾಗೂ ಗ್ರಾಮದವರಿಗೆ ಸೋಂಕಿನ ಭೀತಿ ಎದುರಾಗಿದೆ. 

Add Asianetnews Kannada as a Preferred SourcegooglePreferred

ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಗ್ರಾಮದ ಸಮೀಪದ ಮಾಸ್ತಿಗುಡಿ ಪುನರ್ವಸತಿ ಕೇಂದ್ರದ ಈರಪ್ಪ ಎಂಬುವರಿಗೆ ಗುರುವಾರ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗಿತ್ತು. ಆದರೆ, ಈರಪ್ಪ ಸೆಂಟರ್‌ನಲ್ಲಿ ಎಲ್ಲೆಂದರಲ್ಲಿ ಓಡಾಡುತ್ತಿದ್ದು, ಯಾರ ಮಾತನ್ನೂ ಕೇಳುತ್ತಿರಲಿಲ್ಲ. 

ಮೈಸೂರು: SSLC ವಿದ್ಯಾರ್ಥಿನಿಯ ಬಾಲ್ಯ ವಿವಾಹ ತಡೆದ ಸ್ನೇಹಿತೆ

ಮೈಮೇಲೆ ಬಟ್ಟೆಯನ್ನು ಸಹ ಧರಿಸುತ್ತಿರಲಿಲ್ಲ, ಇದರಿಂದ ಆತನನ್ನು ಕುಟುಂಬದವರ ಜೊತೆಯಲ್ಲಿ ಸೆಂಟರ್‌ನಿಂದ ಕಳುಹಿಸಿರುವುದಾಗಿ ತಾಲೂಕು ಆರೋಗ್ಯಾಧಿಕಾರಿ ಟಿ. ರವಿಕುಮಾರ್‌ ಸ್ಪಷ್ಟಪಡಿಸಿದ್ದಾರೆ.