Asianet Suvarna News Asianet Suvarna News

ಪಿರಿಯಾಪಟ್ಟಣ ಶಾಸಕ ಮಹದೇವ್‌ಗೆ ಕೊರೋನಾ:ಅಧಿವೇಶನಕ್ಕೆ ಗೈರು

ಸೆ.21ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭ| ಎಲ್ಲ ಶಾಸಕರು ಕೋವಿಡ್‌ ಟೆಸ್ಟ್‌ ಕಡ್ಡಾಯ| ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್‌ ವರದಿ ಬಂದ ಕಾರಣ ಹೋಂ ಐಸೋಲೇಷನ್‌ಗೆ ಒಳಪಟ್ಟ ಶಾಸಕರು|
 

Coronavirus Confirmed to Piriyapattana MLA K Mahadevgrg
Author
Bengaluru, First Published Sep 19, 2020, 12:28 PM IST

ಪಿರಿಯಾಪಟ್ಟಣ(ಸೆ.19): ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್‌ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಅವರು ಅಧಿವೇಶನಕ್ಕೆ ಗೈರಾಗಲಿದ್ದಾರೆ ಎಂದು ತಿಳಿದು ಬಂದಿದೆ. 

ಸೆ.21ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಕೋವಿಡ್‌ ಟೆಸ್ಟ್‌ ಮಾಡಿಸಬೇಕು ಎನ್ನುವ ಸೂಚನೆ ನೀಡಲಾಗಿತ್ತು. ಆ ಕಾರಣ ಶನಿವಾರ ಪಟ್ಟಣದ ತಮ್ಮ ನಿವಾಸದಲ್ಲಿ ಟೆಸ್ಟ್‌ ಮಾಡಿಸಿದ್ದರು. ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್‌ ವರದಿ ಬಂದ ಕಾರಣ ಶಾಸಕರು ಹೋಂ ಐಸೋಲೇಷನ್‌ಗೆ ಒಳಪಟ್ಟಿದ್ದಾರೆ. 

ಮೈಸೂರು ದಸರಾ: ಅರಮನೆಯಲ್ಲಿ ಸಿಂಹಾಸನ ಜೋಡಣೆ

ಇತ್ತೀಚೆಗೆ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮನೆಯಲ್ಲಿನ ಸಂದರ್ಶನದ ವೇಳೆ ನೇರ ಸಂಪರ್ಕದಲ್ಲಿದ್ದ ಎಲ್ಲ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು, ಪತ್ರಕರ್ತರು, ಹಿತೈಷಿಗಳು ಕೋವಿಡ್‌-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಕೋರಿದ್ದಾರೆ.


 

Follow Us:
Download App:
  • android
  • ios