ಆಸ್ಪತ್ರೆಯ ಬಾತ್‌ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೋಗಿ| ಕೊಪ್ಪಳ ನಗರದ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದ ಘಟನೆ| ಈ ಸಂಬಂಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು|

ಕೊಪ್ಪಳ(ಸೆ.19): ಕೋವಿಡ್‌-19 ಆತಂಕದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶುಕ್ರವಾರ ಕೊಪ್ಪಳ ನಗರದ ಕೋವಿಡ್‌ ಆಸ್ಪತ್ರೆಯ ಬಾತ್‌ ರೂಮ್‌ನಲ್ಲಿ ನೇಣು ಬಿಗಿದುಕೊಂಡು ರೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಲಬುರ್ಗಾ ತಾಲೂಕಿನ ಚಿಕ್ಕಬಿಡನಾಳ ಗ್ರಾಮದ ಮಾರುತಿ ಕುಕನೂರು(26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಇವರಿಗೆ ಕೋವಿಡ್‌-19 ಪಾಸಿಟಿವ್‌ ಬಂದಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್‌ನಿಂದಾ​ಗಿ ಎದೆಗುಂದಿದ್ದ ಅವರು ವಿಚಿತ್ರ ವರ್ತನೆ ಮಾಡುತ್ತಿದ್ದರು ಎನ್ನಲಾಗಿದೆ. 

ಕನ್ನಡಪ್ರಭ-ಸುವರ್ಣ ನ್ಯೂಸ್.ಕಾಂ ವರದಿ ಫಲ​ಶೃ​ತಿ: ಅಕ್ರಮ ಗಣಿ​ಗಾ​ರಿಕೆ ಪ್ರದೇ​ಶದ ಮೇಲೆ ಅಧಿ​ಕಾ​ರಿ​ಗಳ ದಾಳಿ

ಇದರಿಂದ ಡಿಪ್ರೆಶನ್‌ಗೆ ಹೋಗಿ, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ನಂತರವೇ ಪ್ರಕರಣ ಬೆಳಕಿಗೆ ಬರಬೇಕಾಗಿದೆ.