Asianet Suvarna News Asianet Suvarna News

ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಅಧಿಕಾರಿಗಳಿಗೆ ಶಾಸಕ ಬಸವರಾಜ ರಾಯರಡ್ಡಿ ಎಚ್ಚರಿಕೆ

ತಾಲೂಕಿನ ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ಅಧಿಕಾರಿ ಭ್ರಷ್ಟಾಚಾರ ನಡೆಸಿದರೆ ನಡೆಯುವುದಿಲ್ಲ. ಎಲ್ಲರೂ ಭ್ರಷ್ಟಚಾರ ಮುಕ್ತ ಆಡಳಿತಕ್ಕೆ ಸಹಕರಿಸಬೇಕು. ಸಮಯಪ್ರಜ್ಞೆ ಜತೆ ನನ್ನೊಂದಿಗೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

Corruption is not tolerated in development work Says mla basavaraj rayareddy gvd
Author
First Published Jul 14, 2024, 10:19 PM IST | Last Updated Jul 15, 2024, 12:02 PM IST

ಯಲಬುರ್ಗಾ (ಜು.14): ತಾಲೂಕಿನ ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ಅಧಿಕಾರಿ ಭ್ರಷ್ಟಾಚಾರ ನಡೆಸಿದರೆ ನಡೆಯುವುದಿಲ್ಲ. ಎಲ್ಲರೂ ಭ್ರಷ್ಟಚಾರ ಮುಕ್ತ ಆಡಳಿತಕ್ಕೆ ಸಹಕರಿಸಬೇಕು. ಸಮಯಪ್ರಜ್ಞೆ ಜತೆ ನನ್ನೊಂದಿಗೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಅಭಿವೃದ್ಧಿಗೆ ಮೊದಲ ಆದ್ಯತೆ. ಆದರೆ ಯಾವ ಅಧಿಕಾರಿಗೂ ತೊಂದರೆ ಕೊಡುವ ಮನಸ್ಸು ನನಗಿಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರೀತಿ-ವಿಶ್ವಾಸದಿಂದ ಕಾಣುತ್ತೇನೆ. ವಿನಾಕಾರಣ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗುತ್ತೇನೆ. ಇದನ್ನು ಗಮನದಲ್ಲಿಟ್ಟುಕೊಂಡು ಸದಾ ಕಾರ್ಯನಿರ್ವಹಿಸಬೇಕು. ಅಂಥವರಿಗೆ ಸದಾ ನನ್ನ ಸಹಕಾರವಿರುತ್ತದೆ ಎಂದರು.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ಮನೆ ಕುಸಿತ, ಮರ, ವಿದ್ಯುತ್ ಕಂಬಗಳು ಧರೆಗೆ

ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ: ತಾಲೂಕಿನ ಯಾವ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಗಮನಹರಿಸಬೇಕು. ಜನತೆಗೆ ನೀರು ಪೂರೈಕೆ ಮಾಡುವ ಗುಣಮಟ್ಟದ ಪೈಪ್‌ಗಳನ್ನು ಅಳವಡಿಸಬೇಕು. ಹಿಂದೆ ಮಾಡಿದ ರೀತಿಯಲ್ಲಿ ಕಾಮಗಾರಿಯನ್ನು ಬೇಜವಾಬ್ದಾರಿಯಿಂದ ಮಾಡಿದರೆ ಸಹಿಸುವುದಿಲ್ಲ. ಜೆಜೆಎಂ ಕಾಮಗಾರಿಗಳು ಕಳಪೆ ಮಟ್ಟದಿಂದ ಕೂಡಿದೆ. ಹಾಗೆಯೇ ತಾಲೂಕಿನ ವಿವಿಧ ಭಾಗಗಳಲ್ಲಿ ಈ ಯೋಜನೆಯಡಿ ಪೈಪ್‌ಲೈನ್ ಹಾಳಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಅವುಗಳನ್ನು ಸರಿಪಡಿಸಿ ನೀರು ಪೂರೈಸಬೇಕು ಎಂದು ಹೇಳುತ್ತಿದ್ದಂತೆ ಎಇಇ ರಿಜ್ವಾನಬೇಗಂ ಪ್ರತಿಕ್ರಿಯಿಸಿ, ಗುತ್ತಿಗೆದಾರರು ಮಾಡಿದ ತಪ್ಪಿಗೆ ಹೀಗಾಗಿದೆ. ಅವರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಕಾಮಗಾರಿಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.

ತಾಲೂಕಿನ ಎಲ್ಲ ಗ್ರಾಪಂ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ಕಸ ವಿಲೇವಾರಿ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಸರಿಪಡಿಸುವ ಮುಖ್ಯ ಜವಾಬ್ದಾರಿ ಆಯಾಯ ಪಿಡಿಒಗಳ ಮೇಲಿದೆ. ಶಾಲಾ ಕಟ್ಟಡಗಳು, ವಸತಿ ನಿಲಯಗಳು, ನಿರ್ಮಿಸಿದ ಕೆಲವೇ ತಿಂಗಳಗಳಲ್ಲಿ ಮೇಲ್ಚಾವಣಿ ಕುಸಿತವಾಗುತ್ತಿವೆ ಎಂದು ರಾಯರಡ್ಡಿ ಹೇಳಿದರು. ಗುಣಮಟ್ಟದ ಕಟ್ಟಡವನ್ನು ನಿರ್ಮಿಸಲು ಕೆಕೆಆರ್‌ಡಿಬಿ, ನಿರ್ಮಿತಿ ಕೇಂದ್ರ, ಜಿಪಂ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಲೂಕಿನ ಬಳಗೇರಿ, ಬಂಡಿ, ಚಿಕ್ಕಮ್ಯಾಗೇರಿ ಗ್ರಾಮಗಳಿಗೆ ಹೊಸದಾಗಿ ಆರೋಗ್ಯ ಪ್ರಾಥಮಿಕ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ.

ಗಿರಿ ಶ್ರೇಣಿ ಹಚ್ಚ ಹಸಿರ ಸೊಬಗಿನಿಂದ ನವವಧುವಿನಂತೆ ಸಿಂಗಾರ: ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಪ್ರವಾಸಿಗರ ಡ್ಯಾನ್ಸ್

ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರನ್ನು ಕರೆಯಿಸಿ ಅವುಗಳಿಗೆ ಚಾಲನೆ ನೀಡಲಾಗುವುದು. ಇನ್ನೂ ಪಟ್ಟಣ ಸೇರಿದಂತೆ ತಾಲೂಕಿನ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ಸಚಿವರ ಜತೆ ಚರ್ಚಿಸಿ ನೀಗಿಸಲಾಗುವುದು ಎಂದರು. ಕೆಡಿಪಿ ನಾಮನಿರ್ದೇಶನ ಸದಸ್ಯರಾದ ರಸೂಲಸಾಬ ದಮ್ಮೂರ, ಭೀಮಣ್ಣ ಕೋಳಜಿ, ಹೊಳೆಗೌಡ ಪಾಟೀಲ, ವೀರನಗೌಡ ಪಾಟೀಲ, ನಿಂಗಮ್ಮ ಹಿರೇಮನಿ, ನಾಗರಾಜ ನವಲಹಳ್ಳಿ, ಸಿದ್ಲಿಂಗಪ್ಪ, ಶರಣಪ್ಪಗೌಡ, ಶಪೀಸಾಬ್‌ ಮಂಡಲಗೇರಿ, ಶರಣಮ್ಮ ಅವರನ್ನು ಶಾಸಕ ಬಸವರಾಜ ರಾಯರಡ್ಡಿ ಸ್ವಾಗತಿಸಿ, ಸನ್ಮಾನಿಸಿದರು. ತಾಪಂ ಇಒ ಸಂತೋಷ ಪಾಟೀಲ ಬಿರಾದಾರ, ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ, ಪ್ರಾಣೇಶ, ಸಿಪಿಐ ಮೌನೇಶ್ವರ ಮಾಲಿಪಾಟೀಲ ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು ಇದ್ದರು.

Latest Videos
Follow Us:
Download App:
  • android
  • ios