ಧಾರವಾಡದಲ್ಲಿ ಐದು ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭವಾಗಿದೆ. ೩೦ಕ್ಕೂ ಹೆಚ್ಚು ಬೆಳೆಗಾರರು ಭಾಗವಹಿಸಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಈ ವರ್ಷ ಇಳುವರಿ ಕಡಿಮೆಯಾಗಿದೆ. ಧಾರವಾಡದಲ್ಲಿ ೭ ಕೋಟಿ ವೆಚ್ಚದಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಯಾಗಲಿದೆ. ವಿವಿಧ ತಳಿಗಳ ಮಾವುಗಳು ಮಾರಾಟಕ್ಕೆ ಲಭ್ಯ. ಕೆಲವು ರೈತರು ವಿದೇಶಗಳಿಗೂ ಮಾವು ರಫ್ತು ಮಾಡಿದ್ದಾರೆ.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ : ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ ಇಂದಿನಿಂದ ಐದು ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಬೆಳಿಗ್ಗೆ ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಾವು ಮೇಳವನ್ನು ಉದ್ಘಾಟಿಸಿ, ಮಾತನಾಡಿದರು ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಮಾವು ಮಾರಾಟ ಮೇಳದಲ್ಲಿ ಸುಮಾರು 30 ಜನಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದು ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಅವರು ತಿಳಿಸಿದರು.
ಧಾರವಾಡ ಜಿಲ್ಲೆಯಲ್ಲಿ, ಮಾವು ಒಂದು ಪ್ರಮುಖ ಬೆಳೆಯಾಗಿದ್ದು ಒಟ್ಟ 29610 ಎಕರೆ ( 11844 ಹೆ) ನಲ್ಲಿ, ಅಂದಾಜು 8881 ರೈತರು ಮಾವು ಬೆಳೆಯುತ್ತಿದ್ದಾರೆ ಸಾಂಪ್ರದಾಯಕವಾಗಿ 4 ಟನ್,ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ ಕುಂಠಿತವಾಗಿದ್ದು ಸುಮಾರು 1ಟನ್, ಎಕರೆಯಂತೆ ಜಿಲ್ಲೆಯಿಂದ ಒಟ್ಟು 29000 ಟನ್ ಇಳುವರಿಯನ್ನು ಅಂದಾಜಿಸಬಹುದಾಗಿದೆ ಎಂದು ಅವರು ಹೇಳಿದರು ಧಾರವಾಡ ಜಿಲ್ಲೆಯು ಸಾಂಪ್ರದಾಯಕವಾಗಿ ಮಾವು ಬೆಳೆಯುವ ರಾಜ್ಯದ ಮುಖ್ಯ ಭಾಗವಾಗಿದ್ದು, ಪ್ರಮಖವಾಗಿ ಧಾರವಾಡ, ಕಲಘಟಗಿ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಮಾವು ಬೆಳೆಯನ್ನು ಬೆಳೆಯಲು ಸೂಕ್ತವಾದ ವಾತಾವರಣವಿರುವುದರಿಂದ ಉತ್ತಮ ಮಾವು ಬೆಳೆಯನ್ನು ಬೆಳೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ರೈತರಿಗೆ ಒಳ್ಳೆಯ ಬೆಲೆ ಸಿಗಬೇಕು ಎಂಬ ಉದ್ದೇಶದಿಂದ ಮೇಳವನ್ನು ಆಯೋಜನೆ ಮಾಡಿದ್ದೇವೆ. ಧಾರವಾಡ ಜಿಲ್ಲೆಗೆ ಸರಕಾರದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದೇಶ ನೀಡಿ, ಈಗಾಗಲೇ ಸುಮಾರು 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು ಉದ್ದೇಶಿತ ಮಾವು ಅಭಿವೃದ್ಧಿ ಕೇಂದ್ರವನ್ನು ಧಾರವಾಡ ತಾಲೂಕಿನ ಕುಂಭಾಪುರ ಪಾರ್ಮದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಮಾವು ಅಭಿವೃದ್ಧಿ ಕೇಂದ್ರವು ಜಿಲ್ಲೆಯ ರೈತರಿಗೆ ಮಾತ್ರವಲ್ಲದೇ, ಸುತ್ತಲಿನ ಜಿಲ್ಲೆಗಳಲ್ಲಿ ಮಾವು ಬೆಳೆಯುವ ರೈತರಿಗೂ ಪ್ರಯೋಜನವಾಗಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಮಾವು ಅಭಿವೃದ್ಧಿ ಕೇಂದ್ರದಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ, ಹಣ್ಣು ಮಾಡುವುದು ರೈತರಿಗೆ ಗ್ರೇಡಿಂಗ್ ವ್ಯವಸ್ಥೆ, ಮಾವು ಬೆಳೆಗಳ ತರಬೇತಿ ರೈತರಿಗೆ ಬೇಕಾದ ಎಲ್ಲ ಮಾಹಿತಿಯನ್ನು ನೀಡುವ ಸಮಗ್ರ ಮಾಹಿತಿ ಕೇಂದ್ರವಾಗಿ ನಿರ್ವಹಿಸುತ್ತದೆ ಧಾರವಾಡ ಜಿಲ್ಲೆಯಲ್ಲಿ ಮಾವು ಬೆಳೆಯನ್ನು ಪ್ಯಾಶನ್ ಆಗಿ ತೆಗೆದುಕೊಂಡು ಬೆಳೆಯುವ ಗಾವ್ಕರ್ ಅವರು 100 ವಿಧವಾದ ಮಾವು ಬೆಳೆದಿದ್ದಾರೆ ಅದರಲ್ಲಿ ಸ್ವರ್ಣರೇಖಾ, ಮಿಯಾಜಾಕಿ ಅದರಲ್ಲಿ ಹೈ ಕ್ವಾಲಿಟಿ, ಅತಿ ಹೆಚ್ಚು ಬೆಲೆ ಇರುವ ಮಾವುಗಳನ್ನು ಬೆಳೆದಿದ್ದಾರೆ ಮಾರುಕಟ್ಟೆಯಲ್ಲಿ ಅವುಗಳಿಗೆ ಭಾರಿ ಬೇಡಿಕೆ ಇದೆ ಮಾವು ಬೆಳೆಗಾರರಿಗೆ ಇದರ ಬಗ್ಗೆ ಮಾಹಿತಿ ನೀಡುವ ಅಗತ್ಯವಿದ್ದು, ತೋಟಗಾರಿಕೆ ಇಲಾಖೆಯಿಂದ ಪ್ರಗತಿಪರ ಮಾವು ಬೆಳೆಗಾರ ರೈತರಿಂದ ಪ್ರಮೋದ ಗಾಂವಕರ ಅವರ ಮಾವಿನ ತೋಟಕ್ಕೆ ಭೇಟಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವಮೇಶ ಪಾಟೀಲ, ಹಾಪ್ ಕಾಮ್ಸ್ ಅಧ್ಯಕ್ಷ ಸಿದ್ದಣ್ಣ ಪ್ಯಾಟಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಕೃಷಿ ಇಲಾಖೆ ಉಪ ನಿರ್ದೆಶಕ ಕೆ.ಸಿ.ಭದ್ರಣ್ಣವರ ಹಿರಿಯ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪುರಿ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ತಮ್ಮಣ್ಣ ಗುಂಡಗೋವಿ ಸೇರಿದಂತೆ ಇತರರು ಇದ್ದರು.
ಬಗೆಬಗೆಯ ಮಾವು ಲಭ್ಯ: ಹಣ್ಣುಗಳ ರಾಜ ಮಾವಿನ ಹಣ್ಣುಗಳ ವಿವಿಧ ಬಗೆಬಗೆಗಳಾದ ಸುಂದರ ಶಾ, ಪೈರಿ, ಜಿರಗಿಮಾವು,ಉಪ್ಪಿನಕಾಯಿ ತಳಿ, ಅರ್ಕಾ ನೀಲಕಿರಣ, ಸುವರ್ಣರೇಖಾ, ಧಾರವಾಡ ರಸಪೂರಿ, ಖಾದರ, ಫರ್ನಾಡಿನ್, ಕಿಶನ ಭಾಗ್, ಫಜಲಿ, ದಿಲಪಸಂದ, ರತ್ನಾ, ಗೂಂಗ, ಹಿಮಸಾಗರ, ಆಮ್ರಪಾಲ, ಲಕನೌ ಸಫೇದ, ನಿರಂಜನ, ಸಿಂಧು, ಕಲಪಡಿ, ನೀಲಗೋವಾ, ಮಲ್ಲಿಕಾ, ಅರ್ಕಾ ಪುನೀತ, ಲಾಂಗ್ರಾ, ನಾಜೂಕ ಪಸಂದ, ಚರಕು ರಸಂ ಮುಂಯಾದ ಹಲವಾರು ತಳಿಗಳ ಮಾವಿನ ಹಣ್ಣುಗಳು ಮಾವು ಮೇಳದಲ್ಲಿ ಸಾರ್ವಜನಿಕರಿಗೆ ಮಾರಟಕ್ಕಾಗಿ ಲಭ್ಯ ಇವೆ.
ಹೆಚ್ಚಾಗಿ ವಿದೇಶಗಳಿಗೆ ಮಾವಿನ ತಳಿಗಳಾದ ಆಪೂಸ್, ನೀಲಮ್ ಕೇಸರ ಹಾಗೂ ಸ್ಥಳಿಯ ತಳಿಗಳನ್ನು ಮಾರಾಟ ಮಾಡಲಾಗುತ್ತಿದೆ ಜಿಲ್ಲೆಯ ಕೆಲವು ಮಾವು ಬೆಳೆಗಾರರಾದ ಪ್ರಮೋದ, ಗಾಂವಕರ, ಶಿವನಗೌಡ ಪಾಟೀಲ, ರಾಜೇಂದ್ರ ಪೋದ್ದಾರ, ಗಿರೀಶ ಕೆರೂರ ಹಾಗೂ ದೇಶಪಾಂಡೆ ರವರು ಸುಮಾರು 4 ಟನ್ ಮಾವಿನ ಹೆಣ್ಣುಗಳನ್ನು ರೂ150 ಕೆಜಿ ಯಂತೆ ಸಿಂಗಾಪುರ, ಅಮೇರಿಕಾ ರಾಷ್ಟ್ರಗಳಿಗೆ ರಫ್ತು ಮಾಡಿದ್ದಾರೆ.