Asianet Suvarna News Asianet Suvarna News

ಬೆಂಗಳೂರಿನಲ್ಲಿ ಜೂನ್‌ಗೆ ಕೊರೋನಾ ಕರಾಳತೆ : ಟಾಸ್ಕ್‌ಫೋರ್ಸ್ ಟೀಂ ಎಚ್ಚರಿಕೆ

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಆತಂಕಕಾರಿ ಮಾಹಿತಿಯನ್ನು ಕೋವಿಡ್ ಟಾಸ್ಕ್ ಫೋರ್ಸ್ ಟೀಂ   ತಿಳಿಸಿದೆ. ಬೆಂಗಳೂರಿನ ಪಾಲಿಗೆ ಇದೊಂದು ಆಘಾತಕಾರಿ ವಿಚಾರವಾಗಿದ್ದು, ಜೂನ್‌ಗೆ ಕೋವಿಡ್ ಕೇಸ್‌ಗಳು ವಿಪರೀತವಾಗುವ ಎಚ್ಚರಿಕೆ ನೀಡಿದೆ. 

Covid Task Force Team Reveal Shocking news To Bengaluru snr
Author
Bengaluru, First Published May 5, 2021, 1:32 PM IST

ಬೆಂಗಳೂರು (ಮೇ.05): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮುಂದುವರಿದಿದೆ. ಜನರ ಜೀವ-ಜೀವನವನ್ನು ಹಿಂಡುತ್ತಿರುವ ಮಹಾಮಾರಿಯಿಂದ ತಲ್ಲಣ ಸೃಷ್ಟಿಯಾಗಿದೆ. 

ಇದೇ ವೇಳೆ ಬೆಂಗಳೂರಿನ ಪಾಲಿಗೆ ಮತ್ತೊಂದು ಆಘಾತದ ಸುದ್ದಿಯು ಇಲ್ಲಿದೆ.  ಜೂನ್ ಮೊದಲ ವಾರದ ವೇಳೆಗೆ ಬೆಂಗಳೂರಿಗೆ 70 ಸಾವಿರ ಆಕ್ಸಿಜನ್ ಬೆಡ್ ಗಳು ಬೇಕಾಗಬಹುದೆಂದು ಅಂದಾಜಿಸಲಾಗಿದೆ. ಇದೇ ವೇಗದಲ್ಲಿ ಮಹಾಮಾರಿ ಮುಂದುವರಿದಲ್ಲಿ ಈ ಪ್ರಮಾಣದ ಬೆಡ್‌ಗಳ ಅವಶ್ಯಕತೆ ಇದೆ ಎನ್ನಲಾಗಿದೆ. 

ಐದು ಸಚಿವರಿಗೆ ಕೋವಿಡ್ ಹೊಣೆ, ಉಸ್ತುವಾರಿ ಸಚಿವರು ತಕ್ಷಣ ತಮ್ಮ ಜಿಲ್ಲೆಗೆ ತೆರಳಲು ಸೂಚನೆ

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮಾಹಿತಿ ರವಾನೆ ಮಾಡಿದ್ದು, ಈಗಾಗಲೇ ರಾಜ್ಯ ಸರ್ಕಾರದ ಕೇಂದ್ರ ಸರ್ಕಾರದ ವರದಿಯು ರಾಜ್ಯ ಸರ್ಕಾರದ ಕೈ ಸೇರಿದೆ. 

ಮಂಗಳವಾರ (ಮೇ.4) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಆತಂಕಕಾರಿ ಮಾಹಿತಿಯನ್ನು ಕೋವಿಡ್ ಟಾಸ್ಕ್ ಫೋರ್ಸ್ ಅಧ್ಯಕ್ಷ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. 

ಈ ನಿಟ್ಟಿನಲ್ಲಿ ರಾಜ್ಯದ ಪಾಲಿನ ಆಕ್ಸಿಜನ್ ರಾಜ್ಯವೇ ಬಳಕೆ ಮಾಡಲು ಅನುಮತಿ ಪಡೆಯುವಂತೆ ಸಿಎಂ ಮೇಲೆ ಒತ್ತಡ ಹಾಕಿದ್ದು, ತಾವು ಸತತವಾಗಿ ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿರುವುದಾಗಿ  ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios