ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮುಖ್ಯ ರಸ್ತೆಯ ಪೆಟ್ರೋಲ್‌ ಬಂಕ್‌ ಹತ್ತಿರ ಮೊಸಳೆ ಮರಿಯೊಂದು ಭಾನುವಾರ ತಡರಾತ್ರಿ ಪತ್ತೆಯಾ​ಗಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ.

ಸುಬ್ರಹ್ಮಣ್ಯ(ಜೂ.30): ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮುಖ್ಯ ರಸ್ತೆಯ ಪೆಟ್ರೋಲ್‌ ಬಂಕ್‌ ಹತ್ತಿರ ಮೊಸಳೆ ಮರಿಯೊಂದು ಭಾನುವಾರ ತಡರಾತ್ರಿ ಪತ್ತೆಯಾ​ಗಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ.

Add Asianetnews Kannada as a Preferred SourcegooglePreferred

ಮೊಸಳೆ ಮರಿ ಪತ್ತೆಯಾದ ಅನತಿ ದೂರದಲ್ಲೇ ಕುಮಾರಧಾರಾ ನದಿ ಹರಿಯುತ್ತಿದ್ದು, ನದಿಯಿಂದಲೇ ಮೊಸಳೆ ಮರಿ ಬಂದಿರಬಹುದು ಎನ್ನುವ ಅನುಮಾನವಿದೆ. ಮಳೆಗಾಲದ ಸಂದರ್ಭದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯಲಾರಂಭಿಸುತ್ತಿದ್ದು, ಇದರಿಂದಾಗಿ ನದಿಯಲ್ಲಿ ಇರುವ ಮೊಸಳೆಗಳು ದಡ ಸೇರುತ್ತಿದೆ.

Photos| ಪ್ಯಾಂಟ್‌ನೊಳಗೆ ಮೊಸಳೆ ಮರಿ ಬಚ್ಚಿಟ್ಟಿದ್ದ ಮಹಿಳೆ!

ಮರಿ ಪತ್ತೆಯಾದ ಹಿನ್ನೆಲೆಯ ಇನ್ನೂ ಹಲವು ಮೊಸಳೆಗಳು ದಡಕ್ಕೆ ಬಂದಿರುವ ಸಾಧ್ಯತೆಯಿರುವ ಕಾರಣಕ್ಕಾಗಿ ಸಾರ್ವಜನಿಕರಲ್ಲಿ ಇದೀಗ ಆತಂಕ ಮನೆಮಾಡಿದೆ. ಮೊಸಳೆ ಮರಿ ಗಮನಕ್ಕೆ ಬಂದ ತಕ್ಷಣವೇ ಗ್ರಾಮ ಪಂಚಾಯಿತಿ ಸದಸ್ಯ ದಿನೇಶ್‌ ಬಿ.ಎನ್‌. ಅವರು ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಆದರೆ ಸಿಬ್ಬಂದಿಗಳು ಬರುವ ಸಂದರ್ಭದಲ್ಲಿ ಮೊಸಳೆ ಮರಿ ಕಾಣೆಯಾಗಿದೆ.

ಇದೀಗ ಮೊಸಳೆಯನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆಯೂ ಕುಮಾರಧಾರಾ ನದಿಯಲ್ಲಿ ಮೊಸಳೆಗಳು ಇರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಮೊಸಳೆಗಳ ಇರುವಿಕೆಗೆ ಸಾಕ್ಷಿಯೂ ದೊರೆತಂತಾಗಿದೆ. ಶಿರಾಡಿ ಘಾಟ್‌ ಅರಣ್ಯದಿಂದ ಹರಿದುಬರುವ ಕಾರಣಕ್ಕಾಗಿ ಕುಮಾರಧಾರಾ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲೂ ಇರುವ ಸಾಧ್ಯತೆಯ ಬಗ್ಗೆ ಸ್ಥಳೀಯರು ಅಭಿಪ್ರಾಯಪಡುತ್ತಾರೆ.