*  ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಗೌರವ ಸಲ್ಲಿಸಿದ ಸಿ.ಟಿ. ರವಿ*  ಬಿಹಾರದ ಕಿಶನ್‌ ಗಂಜ್‌ನಲ್ಲಿ ಕಳೆದ ಶನಿವಾರ ಅಕಾಲಿಕ ಮರಣ ಹೊಂದಿದ್ದ ಗಣೇಶ್‌*  ಇಂದು ಗೌರವಗಳೊಂದಿಗೆ ಅಂತಿಮ ಸಂಸ್ಕಾರ 

ಬಾಳೆಹೊನ್ನೂರು(ಜೂ.16): ಇತ್ತೀಚೆಗೆ ಸಾವನ್ನಪ್ಪಿದ ಸೇನಾ ಯೋಧ ಎಂ.ಎನ್. ಗಣೇಶ್ ಅವರ ಪಾರ್ಥೀವ ಶರೀರಕ್ಕೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ(ಬುಧವಾರ) ಶಾಸಕ ಸಿ.ಟಿ. ರವಿ ಅವರು ಗೌರವ ಸಲ್ಲಿಸಿದರು.

Add Asianetnews Kannada as a Preferred SourcegooglePreferred

ಬಿಹಾರದ ಕಿಶನ್‌ ಗಂಜ್‌ನಲ್ಲಿ ಕಳೆದ ಶನಿವಾರ ಅಕಾಲಿಕ ಮರಣ ಹೊಂದಿದ ಖಾಂಡ್ಯ ಹೋಬಳಿಯ ಮಸೀಗದ್ದೆ ಗ್ರಾಮದ ಯೋಧ ಎಂ.ಎನ್‌.ಗಣೇಶ್‌ ಅವರ ಪಾರ್ಥಿವ ಶರೀರ ಇಂದು ಸ್ವಗ್ರಾಮ ತಲುಪಲಿದೆ.

ಚಿಕ್ಕಬಳ್ಳಾಪುರ: ಜೆಡಿಎಸ್ ಕಾರ್ಯಕರ್ತನದ್ದು ಆಕ್ಸಿಡೆಂಟ್ ಅಲ್ಲ ಕೊಲೆ..!

ಗಣೇಶ್‌ ಪಾರ್ಥಿವ ಶರೀರವನ್ನು ಬುಧವಾರ ಬಿಹಾರದ ಭಾಗ್‌ಧೋಗ್ರ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಂದು ಅಲ್ಲಿ ಸಕಲ ಗೌರವಗಳನ್ನು ಸಲ್ಲಿಸಿ ಚಿಕ್ಕಮಗಳೂರಿಗೆ ತರಲಾಗಿದೆ. ಚಿಕ್ಕಮಗಳೂರಿನಿಂದ ಗುರುವಾರ ಬೆಳಗ್ಗೆ 9.30ಕ್ಕೆ ಆಲ್ದೂರು-ಹುಣಸೇಹಳ್ಳಿ ಮಾರ್ಗವಾಗಿ ಸಂಗಮೇಶ್ವರಪೇಟೆ ಸಮುದಾಯ ಭವನಕ್ಕೆ ತಂದು ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಗಣೇಶ್‌ ನಿವಾಸ ಮಸೀಗದ್ದೆಗೆ ಕೊಂಡೊಯ್ದು ಕುಟುಂಬಸ್ಥರು ಅಂತಿಮ ವಿಧಿಗಳನ್ನು ನೆರವೇರಿಸಲಿದ್ದಾರೆ. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದೆ.