ಕಾಸರಗೋಡು ಹಾಗೂ ಮಂಗಳೂರಿನ ನಡುವೆ ಪ್ರಯಾಣಿಸುವವರಿಗೆ ನಿತ್ಯದ ಪಾಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಮಂಗಳೂರು (ಆ.14): ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕಾಸರಗೋಡು ಮತ್ತು ಮಂಗಳೂರು ನಡುವೆ ಬಂದ್‌ ಆಗಿದ್ದ ವಾಹನ ಸಂಚಾರ ಸದ್ಯಕ್ಕೆ ಪುನಾರಂಭಗೊಳ್ಳುವ ಸಾಧ್ಯತೆ ಇಲ್ಲ. ಆದರೆ ಕಾಸರಗೋಡಿನಿಂದ ಕರ್ನಾಟಕಕ್ಕೆ ತೆರಳುವವರಿಗೆ ಪಾಸ್‌ ವ್ಯವಸ್ಥೆ ಪುನರಾರಂಭಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ.

Add Asianetnews Kannada as a Preferred SourcegooglePreferred

ಚಾರ್ಮಾಡಿ ಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ...

ಸೋಮವಾರ ಕೇರಳ ಕಂದಾಯ ಸಚಿವ ಚಂದ್ರಶೇಖರನ್‌ ಅವರು ವಿವಿಧ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳ ಜೊತೆ ನಡೆಸಿದ ಆನ್‌ಲೈನ್‌ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ದ.ಕ. ಜಿಲ್ಲೆಗೆ ನಿತ್ಯ ಬಂದುಹೋಗುವವರಿಗೆ ಹಿಂದಿನಂತೆ ಪಾಸ್‌ ನೀಡಲು ನಿರ್ಧರಿಸಲಾಗಿದೆ. ಆದರೆ ಏಳು ದಿನಗಳ ನಂತರ ಪ್ರಯಾಣ ಮಾಡುವವರು ಕೋವಿಡ್‌ ಆಂಟಿಜೆನ್‌ ಟೆಸ್ಟ್‌ಗೆ ಒಳಗಾಗಬೇಕು. ವಿವಾಹ, ಮರಣ ಇತ್ಯಾದಿ ಸಮಾರಂಭಗಳಿಗೆ ಅಂತರ್‌ ರಾಜ್ಯ ಪ್ರಯಾಣ ನಡೆಸಲು ಅವಕಾಶ ಕಲ್ಪಿಸಲಾಗಿದೆ.