Asianet Suvarna News Asianet Suvarna News

ರೈತನಿಗೆ ಆಯ್ತು ಈಗ ಮತ್ತೆ ಬಟ್ಟೆ ವಿಚಾರದಲ್ಲಿ ಕಾರ್ಮಿಕನಿಗೆ ನಮ್ಮ ಮೆಟ್ರೋ ಸಿಬ್ಬಂದಿ ಅವಮಾನ!

ರೈತನಿಗೆ ಅವಮಾನ ಮಾಡಿದ  ಘಟನೆ ಮಾಸುವ ಮುನ್ನವೇ ಬಟ್ಟೆ ಸರಿಯಿಲ್ಲವೆಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ  ಘಟನೆ  ನಡೆದಿದೆ.  

Daily wage worker denied entry to Bengaluru namma metro over inappropriate gow
Author
First Published Apr 9, 2024, 12:58 PM IST

ಬೆಂಗಳೂರು (ಏ.9): ಬಟ್ಟೆ ಸರಿಯಿಲ್ಲವೆಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ  ಘಟನೆ  ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.  ಮೆಟ್ರೋ ಸಿಬ್ಬಂದಿ ನಡೆಗೆ ಟ್ವಿಟ್ಟರ್ ಎಕ್ಸ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸಂಸದ ತೇಜಸ್ವಿ ಸೂರ್ಯಗೆ ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಲಾಗಿದೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ರೈತರೊಬ್ಬರು ಸ್ವಚ್ಛವಾದ ಬಟ್ಟೆ ಹಾಕಿಲ್ಲವೆಂದು  ರಾಜಾಜಿನಗರ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೆ ಇದೇ ರೀತಿಯ ಘಟನೆ ನಡೆದಿದ್ದು ಸಿಬ್ಬಂದಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಆರ್‌ಸಿಎಲ್‌ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಲಾಗುತ್ತಿದೆ.

ಅನ್ನದಾತನಿಗೆ ಅವಮಾನ ಮಾಡಿದ ಬಳಿಕ ಕಾರ್ಮಿಕನಿಗೆ ಕೂಡ ಮೆಟ್ರೋದಲ್ಲಿ ಅವಮಾನ ಮಾಡಿದ್ದು, ಬಟ್ಟೆ ಸರಿಯಿಲ್ಲವೆಂದು ಮೆಟ್ರೋಗೆ ಎಂಟ್ರಿ ಕೊಡಲು ಸಿಬ್ಬಂದಿ ಹಿಂದೇಟು ಹಾಕಿದ್ದಾರೆ. ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ಕಾರ್ಮಿಕನೊಬ್ಬ ಬಂದಿದ್ದ, ಈ ವೇಳೆ ಶರ್ಟ್ ನಲ್ಲಿ ಗುಂಡಿ ಇಲ್ಲದ ಕಾರಣ ಕಾರ್ಮಿಕನನ್ನ ತಡೆದು ನಿಲ್ಲಿಸಿರುವ ಆರೋಪವಿದ್ದು, ಶರ್ಟ್ ನ ಗುಂಡಿಯನ್ನ ಹಾಕಿಕೊಂಡು  ನೀಟಾಗಿ ಬಾ ಇಲ್ಲದಿದ್ರೆ ಎಂಟ್ರಿ ಕೊಡಲ್ಲವೆಂದ  ಮೆಟ್ರೋ ಸಿಬ್ಬಂದಿ ಗದರಿದ್ದಾರೆಂಬ ಆರೋಪ ಕೇಳಿಬಂದಿದೆ.

ಯಾವುದೇ ವ್ಯಕ್ತಿಯು ಧರಿಸಿರುವ ಬಟ್ಟೆಯ ಸ್ವರೂಪದ ಆಧಾರದ ಮೇಲೆ ಸಾರ್ವಜನಿಕ ಸಾರಿಗೆಗೆ ಪ್ರವೇಶ ನಿರಾಕರಿಸುವಂತಿಲ್ಲ. ಯಾರಾದರೂ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದರೆ ಮಾತ್ರ ತಡೆಯಬಹುದು. ಕಳೆದ ಫೆಬ್ರವರಿಯಲ್ಲಿ ನಡೆದ ಘಟನೆಯಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದಕ್ಕೆ ಎಚ್ಚೆತ್ತ ಬಿಎಂಆರ್‌ಸಿಎಲ್‌, ಆತನನ್ನು ಕೆಲಸದಿಂದಲೇ ವಜಾ ಮಾಡಿತ್ತು.

ಅಂದು ನಮ್ಮ ಮೆಟ್ರೋದಲ್ಲಿ ರೈತನಿಗೆ ಅವಮಾನ ಮಾಡಿದ್ದರು, ಬಟ್ಟೆ ಚೆನ್ನಾಗಿಲ್ಲವೆಂದು ಒಳಗಡೆ ಬಿಟ್ಟಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡಿತ್ತು.

Follow Us:
Download App:
  • android
  • ios