* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ದೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್* ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ* ದ.ಕ ಜಿಲ್ಲೆಯಲ್ಲಿ ಈ ಬಾರಿ ಕೂಡ ಸರಳ ಗಣೇಶೋತ್ಸವ ಆಚರಣೆಗೆ ನಿರ್ಧಾರ* ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗಳಿಲ್ಲ ಅವಕಾಶ

ಮಂಗಳೂರು(ಸೆ. 06) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ದೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ದಕ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ದ.ಕ ಜಿಲ್ಲೆಯಲ್ಲಿ ಈ ಬಾರಿ ಕೂಡ ಸರಳ ಗಣೇಶೋತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ.

Add Asianetnews Kannada as a Preferred SourcegooglePreferred

ಐದು ದಿನಗಳ ಬದಲು ಜಿಲ್ಲೆಯಲ್ಲಿ ಮೂರು ದಿನಗಳಿಗೆ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ, ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆಗೆ ಸೂಚನೆ ನೀಡಲಾಗಿದೆ.

ಗಣೇಶೋತ್ಸವ; ಸರ್ಕಾರದ ನಿಯಮಾವಳಿಗಳು

ರಾಜ್ಯ ಸರ್ಕಾರ ಸಹ ಗಣೇಶ ಹಬ್ಬದ ಸಂಬಂಧ ನಿಯಮಾವಳಿಗಳನ್ನು ಭಾನುವಾರ ತಿಳಿಸಿತ್ತು. ಕೊರೋನಾ ನಿಯಂತ್ರಣದಲ್ಲಿ ಇದ್ದರೂ ನಾಗರಿಕರು ಎಚ್ಚರಿಕೆ ವಹಿಸಬೇಕಾಗಿದ್ದು ಅಗತ್ಯ ಎಂದು ತಿಳಿಸಲಾಗಿದೆ. ಹಾಗಾಗಿ ಗಣೇಶ ಹಬ್ಬದ ಅದ್ದೂರಿತನಕ್ಕೆ ಅನಿವಾರ್ಯವಾಗಿ ಬ್ರೇಕ್ ಹಾಕಲಾಗಿ .