ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ನಲ್ಲಿ ಸಂವಿದಾನವನ್ನು ಸುಟ್ಟಿದ್ದ ದುಷ್ಕರ್ಮಿಗಳು ಆರೆಸ್ಸೆಸ್ ವಿರುದ್ಧ ಧಿಕ್ಕಾರ ಕೂಗಿದ ದಲಿತ ಸಂಘಟನೆಗಳು
ಮಂಗಳೂರು: ದೆಹಲಿಯಲ್ಲಿ ಸಂವಿಧಾನ ಸುಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಮನುಸ್ಮೃತಿ ಪುಸ್ತಕಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Add Asianetnews Kannada as a Preferred Source

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿವಿಧ ದಲಿತ ಸಂಘಟನೆಗಳು ಮನುಸ್ಮೃತಿ ಪುಸ್ತಕ ಹಾಗೂ ಭಿತ್ತಿಪತ್ರಗಳಿಗೆ ಬೆಂಕಿ ಹಚ್ಚಿದ್ದಾರೆ.
ದಲಿತ ಸಂಘರ್ಷ ಸಮಿತಿ [ಡಿಎಸ್ ಎಸ್] ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಆರೆಸ್ಸೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಆರೆಸ್ಸೆಸ್ ಸಂವಿಧಾನವಿರೋಧಿಯಾಗಿದ್ದು ಮೀಸಲಾತಿಯನ್ನು ವಿರೋಧಿಸುವ ಮೂಲಕ ಅಂಬೇಡ್ಕರ್ ರನ್ನು ಅವಮಾನಿಸುತ್ತಿದೆಯೆಂದು ಪ್ರತಿಭಟನಾಕಾರರು ಅದರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಕೆಲ ದುಷ್ಕರ್ಮಿಗಳು ದೆಹಲಿಯ ಜಂತರ್ ಮಂತರ್ ನಲ್ಲಿ ಇತ್ತೀಚೆಗೆ ಸಂವಿಧಾನವನ್ನು ಸುಟ್ಟಿದ್ದರು.
