ದಸರೆಂದಯ ಮೈಸೂರಿಗೆ ಬಂದಿದ್ದ ಆನೆಯನ್ನು ಮತ್ತೆ ಕಾಡಿಗೆ ವಾಪಸ್ ಕಳುಹಿಸಲಾಗುತ್ತಿದೆ ಕಾರಣವೇನು ಇಲ್ಲಿದೆ. 

ಮೈಸೂರು [ಸೆ.10]: ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದ ಆನೆ ಈಶ್ವರನನ್ನು ಕಾಡಿನತ್ತ ವಾಪಸ್ ಕಳುಹಿಸಲಾಗುತ್ತಿದೆ. 

Add Asianetnews Kannada as a Preferred SourcegooglePreferred

ದುಬಾರೆ ಆನೆ ಶಿಬಿರದಿಂದ ಮೊದಲ ತಂಡದಲ್ಲಿ ದಸರೆಗೆಂದು ಆಗಮಿಸಿದ್ದ ಆನೆ ಈಶ್ವರ ಆನೆ ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳದ ಕಾರಣ ವಾಪಸ್ ಕಳುಹಿಸಲು ನಿರ್ಧರಿಸಲಾಗಿದೆ. 

ಈಶ್ವರನ ಬದಲಾಗಿ ದಸರೆಗೆ ಬೇರೆ ಆನೆಯನ್ನು ಕರೆತರಲು ಅರಣ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದಸರೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮೈಸೂರು ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಆನೆಯ ಬಗ್ಗೆ ಆತಂಕ ಹೊರಹಾಕಿದ್ದರು. ಅಲ್ಲದೇ ಆನೆಯ ವರ್ತನೆ ಸಾರ್ವಜನಿಕರಿಂದಲೂ ದೂರುಗಳು ಬಂದ ಹಿನ್ನೆಲೆ ವಾಪಸ್ ಕಳಿಸಲು ನಿರ್ಧಾರ ಮಾಡಿದ್ದಾರೆ. 

ಮೊದಲ ತಂಡದ ಜೊತೆಗೆ ಮೊದಲ ಆಗಸ್ಟ್ ನಲ್ಲಿ ಅಂಬಾರಿ ಆನೆ ಅರ್ಜುನ, ಅಭಿಮನ್ಯು, ಧನಂಜಯ, ವಿಜಯ ಮತ್ತು ವರಲಕ್ಷ್ಮಿ ಆನೆಗಳೊಂದಿಗೆ ಈಶ್ವರ ಆಗಮಿಸಿದ್ದು, ಇದೀಗ ಆತ ಹೊಂದಿಕೊಳ್ಳದ ಕಾರಣ ವಾಪಸ್ ಕಳಿಸಲಾಗುತ್ತಿದೆ.